ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ಹಂಚಿಕೆಯಲ್ಲಿ ಕನ್ನಡ ಕಡೆಗಣನೆ: ಮನು ಬಳಿಗಾರ್ ಆಕ್ರೋಶ

ಸಂಸ್ಕೃತ ಭಾಷೆಗೆ ₹ 1,200 ಕೋಟಿ, ಕನ್ನಡಕ್ಕೆ ₹ 8.39 ಕೋಟಿ
Last Updated 11 ಡಿಸೆಂಬರ್ 2021, 16:25 IST
ಅಕ್ಷರ ಗಾತ್ರ

ಬೆಂಗಳೂರು: ‘ಏಳು ಕೋಟಿ ಜನರ ಭಾಷೆಯಾಗಿರುವ ಕನ್ನಡಕ್ಕೆ ಅನುದಾನ ಹಂಚಿಕೆಯಲ್ಲಿಕೇಂದ್ರ ಸರ್ಕಾರ ತಾರತಮ್ಯ ಮಾಡಿರುವುದು ಖಂಡನೀಯ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕೇಂದ್ರ ಸರ್ಕಾರ 7 ವರ್ಷಗಳಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ನೀಡಿದ ಅನುದಾನ ಕೇವಲ ₹ 8.39 ಕೋಟಿ. ಸಂಸ್ಕೃತ ಭಾಷೆಗೆ ₹ 1,200 ಕೋಟಿ ಹಾಗೂ ತಮಿಳಿಗೆ ₹ 50 ಕೋಟಿ ಅನುದಾನ ನೀಡಲಾಗಿದೆ. ಕನ್ನಡ ಕಡೆಗಣನೆಯನ್ನು ಯಾವ ಕನ್ನಡ ಪ್ರೇಮಿಯೂ ಸಹಿಸಿಕೊಳ್ಳಲಾರ. ಕೇಂದ್ರ ಸರ್ಕಾರವು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಇತಿಹಾಸ ಇರುವ ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿ, ಕೈತೊಳೆದುಕೊಂಡಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ನಮ್ಮ ಭಾಷೆಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಒಬ್ಬಿಬ್ಬರು ಸಂಸದರು ಮಾತ್ರ ಧ್ವನಿ ಎತ್ತುತ್ತಿದ್ದಾರೆ. ಉಳಿದವರು ಬಾಯಿ ಮುಚ್ಚಿಕೊಂಡಿರುವುದು ಅವಮಾನಕರ ಸಂಗತಿ. ಅವರೆಲ್ಲರೂ ನೆರೆಯ ರಾಜ್ಯಗಳನ್ನು ನೋಡಿಯಾದರೂ ಎಚ್ಚೆತ್ತುಕೊಳ್ಳಬೇಕು. ತಕ್ಷಣ ಕೇಂದ್ರ ಸರ್ಕಾರ ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಸ್ಥಾನಕ್ಕೆ (ಸಿಐಐಎಲ್) ಹೆಚ್ಚು ಹಣ ಬಿಡುಗಡೆ ಮಾಡಬೇಕು. ಅದಕ್ಕೆ ಸ್ವಾಯತ್ತತೆ ಒದಗಿಸುವ ಬಗ್ಗೆ ಆದೇಶ ಹೊರಡಿಸಿ, ಬಹುದಿನಗಳ ಬೇಡಿಕೆ ಈಡೇರಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT