ಬೆಂಗಳೂರು: ಒಬ್ಬ ವ್ಯಕ್ತಿಗೆ ಬದಲಿ ನಿವೇಶನದ ರೂಪದಲ್ಲಿ ಹಂಚಿಕೆಯಾಗಿದ್ದ ನಿವೇಶನವನ್ನು ಯಾವುದೇ ಸೂಚನೆ ನೀಡದೆಯೇ ರದ್ದುಪಡಿಸಿ, ಅದನ್ನು ಇನ್ನೊಬ್ಬ ವ್ಯಕ್ತಿಗೆ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಉಪ ಕಾರ್ಯದರ್ಶಿ –1 ಆಗಿ ಕಾರ್ಯ ನಿರ್ವಹಿಸಿದ್ದ ಇಬ್ಬರು ಕೆಎಎಸ್ ಅಧಿಕಾರಿಗಳು ಎದುರಿಸುತ್ತಿದ್ದಾರೆ. ಈ ಪ್ರಕರಣವನ್ನು ಭ್ರಷ್ಟಾಚಾರ ನಿಗ್ರಹ ದಳದಿಂದ ತನಿಖೆಗೆ ಒಳಪಡಿಸಲು ಪ್ರಾಧಿಕಾರವು ಶಿಫಾರಸು ಮಾಡಿದೆ.