ಬೆಂಗಳೂರು: ಬಿಡಿಎ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ 33 ಎಕರೆ 2 ಗುಂಟೆ ಜಾಗ ಮಂಜೂರು ಮಾಡಿರವುದು ಅಕ್ರಮ ಎಂದು ಹೈಕೋರ್ಟ್ ಹೇಳಿದೆ.
ಬಿ.ವಿ. ಶಿವಸ್ವಾಮಿ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
‘ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡಕಲ್ಲಸಂದ್ರ ಗ್ರಾಮದಲ್ಲಿ ಸಂಘಕ್ಕೆ2006ರ ನವೆಂಬರ್ನಲ್ಲಿ ಭೂಮಿ ನೀಡಲಾಗಿದೆ. ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದೆ ಇರುವುದು ಕಾನೂನಿನ ಉಲ್ಲಂಘನೆ’ ಎಂದು ಅರ್ಜಿದಾರರು ದೂರಿದ್ದಾರೆ.
ಐದು ಎಕರೆಗಿಂತ ಹೆಚ್ಚಿನ ಭೂಮಿಯನ್ನು ಯಾವುದೇ ಸಂಘ ಅಥವಾ ಸಂಸ್ಥೆಗೆ ನೀಡಬೇಕೆಂದರೆ ಅದಕ್ಕೆ ಸರ್ಕಾರದ ಪೂರ್ವಾನುಮತಿ ಅಗತ್ಯ ಎಂದು ಪೀಠ ಹೇಳಿತು.