<p><strong>ಬೆಂಗಳೂರು:</strong> ನಗರದಲ್ಲಿ ಹೂವಿನ ಮಾರುಕಟ್ಟೆ ನಿರ್ಮಾಣ ಮಾಡುವ ಅವಶ್ಯಕತೆಯಿದ್ದು, ಇದಕ್ಕಾಗಿ 10 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿಕೊಡಬೇಕು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.</p>.<p>ಕಂದಾಯ ಸಚಿವ ಆರ್. ಅಶೋಕ ಅವರಿಗೆ ಈ ಪತ್ರ ಬರೆದಿರುವ ಸೋಮಶೇಖರ್, ‘ರಾಷ್ಟ್ರದಲ್ಲೇ ಉತ್ತಮ ಗುಣಮಟ್ಟದ ವಿವಿಧ ಹೂವುಗಳ ಪೈಕಿ ಶೇ 80ರಷ್ಟನ್ನು ನಗರದ ಹೊರವಲಯದಲ್ಲಿ ಬೆಳೆಯಲಾಗುತ್ತದೆ. ಈ ಬೆಳೆಗಾರರಿಗೆ ಮತ್ತು ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲು ಹೂವಿನ ಮಾರುಕಟ್ಟೆಯ ಅವಶ್ಯಕತೆ ಇದೆ’ ಎಂದು ಅವರು ಹೇಳಿದ್ದಾರೆ.</p>.<p>‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತ–ಮುತ್ತಲಿನ ಪ್ರದೇಶದಲ್ಲಿ 10 ಎಕರೆ ಜಮೀನು ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಕೃಷಿ ಮಾರಾಟ ಮಂಡಳಿಯ ಪ್ರಮುಖ ಸಭೆಯಲ್ಲೂ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು, ಹೂವು ಮಾರುಕಟ್ಟೆ ಅಭಿವೃದ್ಧಿಯ ಕುರಿತು ಪ್ರಸ್ತಾಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಹೂವಿನ ಮಾರುಕಟ್ಟೆ ನಿರ್ಮಾಣ ಮಾಡುವ ಅವಶ್ಯಕತೆಯಿದ್ದು, ಇದಕ್ಕಾಗಿ 10 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿಕೊಡಬೇಕು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.</p>.<p>ಕಂದಾಯ ಸಚಿವ ಆರ್. ಅಶೋಕ ಅವರಿಗೆ ಈ ಪತ್ರ ಬರೆದಿರುವ ಸೋಮಶೇಖರ್, ‘ರಾಷ್ಟ್ರದಲ್ಲೇ ಉತ್ತಮ ಗುಣಮಟ್ಟದ ವಿವಿಧ ಹೂವುಗಳ ಪೈಕಿ ಶೇ 80ರಷ್ಟನ್ನು ನಗರದ ಹೊರವಲಯದಲ್ಲಿ ಬೆಳೆಯಲಾಗುತ್ತದೆ. ಈ ಬೆಳೆಗಾರರಿಗೆ ಮತ್ತು ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲು ಹೂವಿನ ಮಾರುಕಟ್ಟೆಯ ಅವಶ್ಯಕತೆ ಇದೆ’ ಎಂದು ಅವರು ಹೇಳಿದ್ದಾರೆ.</p>.<p>‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತ–ಮುತ್ತಲಿನ ಪ್ರದೇಶದಲ್ಲಿ 10 ಎಕರೆ ಜಮೀನು ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಕೃಷಿ ಮಾರಾಟ ಮಂಡಳಿಯ ಪ್ರಮುಖ ಸಭೆಯಲ್ಲೂ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು, ಹೂವು ಮಾರುಕಟ್ಟೆ ಅಭಿವೃದ್ಧಿಯ ಕುರಿತು ಪ್ರಸ್ತಾಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>