ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಪೀಣ್ಯ ಮೇಲ್ಸೇತುವೆ: ಸಿಗದ ‘ಗ್ರೀನ್‌ ಸಿಗ್ನಲ್‌’

400 ಕೇಬಲ್ ಬದಲಾವಣೆ ಮಾಡಿದ್ದರೂ ಭಾರಿ ವಾಹನ ಸಂಚಾರಕ್ಕೆ ಅನುಮತಿ ಇಲ್ಲ
Published : 4 ಜೂನ್ 2024, 0:00 IST
Last Updated : 4 ಜೂನ್ 2024, 0:00 IST
ಫಾಲೋ ಮಾಡಿ
Comments
ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರ ಜೊತೆಗೆ ಮುಂದಿನ ವಾರ ಸಭೆ ನಡೆಸಿ ಭಾರಿ ವಾಹನ ಸಂಚಾರಕ್ಕೆ ಅನುಮತಿ ನೀಡುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ.
ಜಯಕುಮಾರ್‌ ಎಂಜಿನಿಯರ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ದುರಸ್ತಿ ಕಾರ್ಯ ಏನು– ಎತ್ತ?
* ಮೇಲ್ಸೇತುವೆಯ 102 103ನೇ ಪಿಲ್ಲರ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ 2021ರ ಡಿಸೆಂಬರ್‌ನಲ್ಲಿ ಎಲ್ಲ ಮಾದರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. * 2022ರಲ್ಲಿ ತಜ್ಞರು ಪರಿಶೀಲಿಸಿ ಭಾರಿ ವಾಹನ ಸಂಚಾರ ನಿರ್ಬಂಧಿಸಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. * ತಜ್ಞರ ಸೂಚನೆಯಂತೆ 2023ರ ಜನವರಿಯಲ್ಲಿ ಕೇಬಲ್‌ಗಳ ಬದಲಾವಣೆ ಕಾಮಗಾರಿ ಆರಂಭಿಸಲಾಗಿತ್ತು. ಡಿಸೆಂಬರ್‌ ವೇಳೆಗೆ 400 ಕೇಬಲ್‌ಗಳ ಬದಲಾವಣೆ ಕೆಲಸ ಪೂರ್ಣಗೊಂಡಿತ್ತು. * ಇದೇ ವರ್ಷದ ಜನವರಿ 16ರಿಂದ ಮೂರು ದಿನ ಮೇಲ್ಸೇತುವೆ ಪರಿಶೀಲನಾ ಕಾರ್ಯ ನಡೆಸಲಾಗಿತ್ತು. ಪರಿಶೀಲನಾ ಕಾರ್ಯದ ವೇಳೆ ಮೇಲ್ಸೇತುವೆಯ ಸಾಮರ್ಥ್ಯ ಹೆಚ್ಚಿರುವುದು ಗೊತ್ತಾಗಿತ್ತು. * ಜನವರಿ 29ರಂದು ಹೆದ್ದಾರಿ ಪ್ರಾಧಿಕಾರಕ್ಕೆ ಪರಿಶೀಲನಾ ವರದಿ ಸಲ್ಲಿಸಿದ್ದ ತಜ್ಞರು.
‘ಹೆದ್ದಾರಿ ಪ್ರಾಧಿಕಾರದವರು ಸಂರ್ಪಕಿಸಿಲ್ಲ’
ಜನವರಿಯಲ್ಲಿ ಸಾಮರ್ಥ್ಯ ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಟ್ಟು ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಿದ್ದೆವು. ಅದಾದ ಮೇಲೆ ಹೆದ್ದಾರಿ ಪ್ರಾಧಿಕಾರದವರು ನಮ್ಮನ್ನು ಸಂಪರ್ಕಿಸಿಲ್ಲ. ಹೆದ್ದಾರಿಯಲ್ಲಿ ನೀರು ಸಂಗ್ರಹಗೊಳ್ಳುತ್ತಿದೆ. ಮೇಲ್ಸೇತುವೆಯಲ್ಲಿ ಬಸ್‌ ಟ್ಯಾಂಕರ್‌ಗಳ ಸಂಚಾರಕ್ಕೆ ಅವಕಾಶ ಲಭಿಸಿದರೆ ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಸ್ವಲ್ಪಮಟ್ಟಿಗೆ ತಗ್ಗಲಿದೆ.– ಎಂ.ಎನ್‌.ಅನುಚೇತ್‌ ಜಂಟಿ ಪೊಲೀಸ್‌ ಕಮಿಷನರ್‌ ಸಂಚಾರ ವಿಭಾಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT