‘ಹೆದ್ದಾರಿ ಪ್ರಾಧಿಕಾರದವರು ಸಂರ್ಪಕಿಸಿಲ್ಲ’
ಜನವರಿಯಲ್ಲಿ ಸಾಮರ್ಥ್ಯ ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಟ್ಟು ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಿದ್ದೆವು. ಅದಾದ ಮೇಲೆ ಹೆದ್ದಾರಿ ಪ್ರಾಧಿಕಾರದವರು ನಮ್ಮನ್ನು ಸಂಪರ್ಕಿಸಿಲ್ಲ. ಹೆದ್ದಾರಿಯಲ್ಲಿ ನೀರು ಸಂಗ್ರಹಗೊಳ್ಳುತ್ತಿದೆ. ಮೇಲ್ಸೇತುವೆಯಲ್ಲಿ ಬಸ್ ಟ್ಯಾಂಕರ್ಗಳ ಸಂಚಾರಕ್ಕೆ ಅವಕಾಶ ಲಭಿಸಿದರೆ ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಸ್ವಲ್ಪಮಟ್ಟಿಗೆ ತಗ್ಗಲಿದೆ.– ಎಂ.ಎನ್.ಅನುಚೇತ್ ಜಂಟಿ ಪೊಲೀಸ್ ಕಮಿಷನರ್ ಸಂಚಾರ ವಿಭಾಗ