ವಿಶ್ವ ಅಲ್ಝೈಮರ್ ದಿನದ ಪ್ರಯುಕ್ತ ಪ್ರಕಟಣೆ ಹೊರಡಿಸಿರುವ ಇಲಾಖೆ, ‘ಈ ರೋಗದ ಬಗ್ಗೆ ಜಾಗೃತಿ ಮೂಡಿಸಿ, ತಪ್ಪು ಕಲ್ಪನೆಯನ್ನು ಹೋಗಲಾಡಿಸಬೇಕು. ಈ ಕಾಯಿಲೆ ಎದುರಿಸುತ್ತಿರುವವರಿಗೆ ಸಹಾನುಭೂತಿಯ ಆರೈಕೆ ಅಗತ್ಯ. ದಿನನಿತ್ಯದ ಜೀವನದಲ್ಲಿ ನೆನಪಿನ ಶಕ್ತಿ ಕಡಿಮೆಯಾಗುವುದು, ಸ್ಥಳ ಮತ್ತು ಸಮಯದ ಬಗ್ಗೆ ಗೊಂದಲ, ವಸ್ತುಗಳನ್ನು ಎಲ್ಲೆಂದರೆಲ್ಲಿ ಇಡುವುದು, ದೃಶ್ಯಗಳು ಹಾಗೂ ಚಿತ್ರಗಳನ್ನು ಗುರುತಿಸುವಲ್ಲಿ ವಿಫಲರಾಗುವುದು ಸೇರಿ ವಿವಿಧ ಲಕ್ಷಣಗಳನ್ನು ಈ ಕಾಯಿಲೆಗೆ ಒಳಗಾದವರು ಎದುರಿಸುತ್ತಾರೆ’ ಎಂದು ತಿಳಿಸಿದೆ.