<p><strong>ಕೆ.ಆರ್.ಪುರ:</strong> ‘ಶೋಷಿತರ ಬಾಳಿನ ಬೆಳಕಗಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ನಿಕೃಷ್ಟವಾಗಿ ನಡೆಸಿಕೊಂಡಿತು‘ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.</p>.<p>ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ವೈಟ್ಫೀಲ್ಡ್ ಸಮೀಪದ ಅಂಬೇಡ್ಕರ್ ನಗರದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ಹಾಗೂ ಅಂಬೇಡ್ಕರ್ ಭವನವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>ವಿಶ್ವದಲ್ಲೇ ದೇಶಕ್ಕೆ ಅತ್ಯುನ್ನತ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ಹೀನಾಯ ನಡೆಸಿಕೊಂಡಿತ್ತು. ಅವರು ರಾಜಕೀಯ ಬೆಳವಣಿಗೆ ಹೊಂದಿದ್ದರೆ ಮುಂದೊಂದು ದಿನ ದೇಶದ ಪ್ರಧಾನಿ ಅಥವಾ ರಾಷ್ಟ್ರಪತಿಯಾಗುತ್ತಿದ್ದರು. ಆ ಉದ್ದೇಶದಿಂದ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು’ ಎಂದರು.</p>.<p>‘ಅಂಬೇಡ್ಕರ್ ಅವರು ಸಂವಿಧಾನ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ. ನಮ್ಮ ರಕ್ಷಣೆಗೆ ಕಾನೂನುಗಳನ್ನು ನೀಡಿದ್ದಾರೆ. ಇವೆಲ್ಲವನ್ನು ನಾವು ಅರಿತುಕೊಳ್ಳಬೇಕಿದೆ. ಸಂವಿಧಾನ ಆಶಯಗಳು ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು' ಎಂದರು.</p>.<p>ಈ ಸಂಧರ್ಭದಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ, ಕ್ಷೇತ್ರದ ಗ್ರಾಮಾಂತರ ಮಂಡಲ ಅಧ್ಯಕ್ಷ ಹೆಚ್.ಎಸ್ ಪಿಳ್ಳಪ್ಪ, ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ, <br /> ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಮಾರಪ್ಪ ಮುಖಂಡರಾದ ಮನೋಹರ ರೆಡ್ಡಿ, ಮಹೇಂದ್ರ ಮೋದಿ, ಕೈಕೊಂಡ್ರಹಳ್ಳಿ ಪ್ರದೀಪ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಶೋಷಿತರ ಬಾಳಿನ ಬೆಳಕಗಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ನಿಕೃಷ್ಟವಾಗಿ ನಡೆಸಿಕೊಂಡಿತು‘ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.</p>.<p>ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ವೈಟ್ಫೀಲ್ಡ್ ಸಮೀಪದ ಅಂಬೇಡ್ಕರ್ ನಗರದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ಹಾಗೂ ಅಂಬೇಡ್ಕರ್ ಭವನವನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>ವಿಶ್ವದಲ್ಲೇ ದೇಶಕ್ಕೆ ಅತ್ಯುನ್ನತ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಪಕ್ಷ ಹೀನಾಯ ನಡೆಸಿಕೊಂಡಿತ್ತು. ಅವರು ರಾಜಕೀಯ ಬೆಳವಣಿಗೆ ಹೊಂದಿದ್ದರೆ ಮುಂದೊಂದು ದಿನ ದೇಶದ ಪ್ರಧಾನಿ ಅಥವಾ ರಾಷ್ಟ್ರಪತಿಯಾಗುತ್ತಿದ್ದರು. ಆ ಉದ್ದೇಶದಿಂದ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು’ ಎಂದರು.</p>.<p>‘ಅಂಬೇಡ್ಕರ್ ಅವರು ಸಂವಿಧಾನ ಮೂಲಕ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ನೀಡಿದ್ದಾರೆ. ನಮ್ಮ ರಕ್ಷಣೆಗೆ ಕಾನೂನುಗಳನ್ನು ನೀಡಿದ್ದಾರೆ. ಇವೆಲ್ಲವನ್ನು ನಾವು ಅರಿತುಕೊಳ್ಳಬೇಕಿದೆ. ಸಂವಿಧಾನ ಆಶಯಗಳು ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು' ಎಂದರು.</p>.<p>ಈ ಸಂಧರ್ಭದಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ, ಕ್ಷೇತ್ರದ ಗ್ರಾಮಾಂತರ ಮಂಡಲ ಅಧ್ಯಕ್ಷ ಹೆಚ್.ಎಸ್ ಪಿಳ್ಳಪ್ಪ, ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ, <br /> ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಮಾರಪ್ಪ ಮುಖಂಡರಾದ ಮನೋಹರ ರೆಡ್ಡಿ, ಮಹೇಂದ್ರ ಮೋದಿ, ಕೈಕೊಂಡ್ರಹಳ್ಳಿ ಪ್ರದೀಪ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>