ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮೋಹಳ್ಳಿ: ಅಂಬೇಡ್ಕರ್‌ ಭವನ ಉದ್ಘಾಟನೆ

Last Updated 6 ಜುಲೈ 2020, 19:11 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ‘ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಹೆಸರಿನಲ್ಲಿ ನಿರ್ಮಿಸಿರುವ ಸಮುದಾಯ ಭವನವು ಒಳ್ಳೆಯ ಕೆಲಸಗಳಿಗೆ ಬಳಕೆಯಾಗಲಿ’ ಎಂದು ರಾಮೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ರೂಪಾ ವೇಣುಗೋಪಾಲ್‌ ಹೇಳಿದರು.

ರಾಮೋಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಿ ಚಂದ್ರಪ್ಪ, ‘ಎಲ್ಲ ಸಮುದಾಯಗಳಿಗೆ ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಿಕೊಟ್ಟ ಅಂಬೇಡ್ಕರ್ ಅವರ ತೋರಿದ ಹಾದಿಯಲ್ಲಿ ಎಲ್ಲರೂ ನಡೆದು ನೆಮ್ಮದಿಯ ಸಮಾಜ ನಿರ್ಮಿಸೋಣ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಲತಾ ಹನುಮಂತೇಗೌಡ ಮಾತನಾಡಿದರು. ರಾಮೋಹಳ್ಳಿ ರೈತ ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ವಿ.ವೇಣುಗೋಪಾಲ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಪರಮಶಿವಯ್ಯ, ಸದಸ್ಯರಾದ ಲಕ್ಷ್ಮೀಪತಿ, ಚೇತನ್, ಮುಖಂಡ ಎಂ.ಚಂದ್ರಪ್ಪ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT