<p><strong>ಬೆಂಗಳೂರು</strong>: ‘ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾನ್ಶಿರಾಮ್ ನಗರದಲ್ಲಿ ಅಳವಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕಾನ್ಶಿರಾಮ್ ಅವರ 9 ಫಲಕಗಳನ್ನು ನಿಯಮಬಾಹಿರವಾಗಿ ತೆರವು ಮಾಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಕಾರ್ಯಕರ್ತರು ನಗರದಲ್ಲಿ ಸೋಮವಾರ ಕಾಲ್ನಡಿಗೆ ಜಾಥಾ ನಡೆಸಿದರು.</p>.<p>ಎಂ.ಎಸ್.ಪಾಳ್ಯದಿಂದ ಲಕ್ಷ್ಮಿಪುರ ವೃತ್ತದವರೆಗೆ ಜಾಥಾ ಸಾಗಿತು. ಕಾನ್ಶಿರಾಮ್ ನಗರ, ಲಕ್ಷ್ಮಿಪುರ, ವಡೇರಹಳ್ಳಿ, ಗುಣಿ ಅಗ್ರಹಾರ, ವಿಶ್ವನಾಥ್ ನಗರ, ಬೆಸ್ಟ್ ಕೌಂಟಿ ಹಾಗೂ ಸುತ್ತಮುತ್ತ ಪ್ರದೇಶಗಳ ನಿವಾಸಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<p>‘ಫಲಕ ತೆರವು ಮಾಡಿದವರನ್ನು ಗಡಿಪಾರು ಮಾಡಿ’, ‘ಮೂಲ ಸೌಕರ್ಯ ಕಲ್ಪಿಸಿ’ ಸೇರಿದಂತೆ ಹಲವು ಘೋಷಣಾ ಫಲಕಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು.</p>.<p>‘ಕಾನ್ಶಿರಾಮ್ ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿದೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ವಡೇರಹಳ್ಳಿ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯ, ಪಿಡಿಒ ಹಾಗೂ ಇತರರು ಸೇರಿಕೊಂಡು ಫಲಕ ತೆರವು ಮಾಡಿದ್ದಾರೆ. ಅದೇ ಜಾಗವನ್ನು ಅಕ್ರಮವಾಗಿ ಬೇರೆ ಫಲಕಗಳನ್ನು ನಿಲ್ಲಿಸಿದ್ದಾರೆ’ ಎಂದು ಪ್ರತಿಭಟನಕಾರರು ದೂರಿದರು.</p>.<p class="Subhead"><strong>ಮೂಲ ಸೌಕರ್ಯ ಕಲ್ಪಿಸಲು ಆಗ್ರಹ: </strong>‘ಕಾನ್ಶಿರಾಮ್ ನಗರ, ಲಕ್ಷ್ಮಿಪುರ, ವಡೇರಹಳ್ಳಿ, ಗುಣಿ ಅಗ್ರಹಾರ, ವಿಶ್ವನಾಥ್ ನಗರ, ಬೆಸ್ಟ್ ಕೌಂಟಿ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>‘ರಸ್ತೆ ಡಾಂಬರೀಕರಣ ಹಾಗೂ ಬೀದಿ ದೀಪ ವ್ಯವಸ್ಥೆ ಮಾಡಬೇಕು. ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡಬೇಕು. ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು’ ಎಂದೂ ಆಗ್ರಹಿಸಿದರು.</p>.<p>ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾನ್ಶಿರಾಮ್ ನಗರದಲ್ಲಿ ಅಳವಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಕಾನ್ಶಿರಾಮ್ ಅವರ 9 ಫಲಕಗಳನ್ನು ನಿಯಮಬಾಹಿರವಾಗಿ ತೆರವು ಮಾಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಕಾರ್ಯಕರ್ತರು ನಗರದಲ್ಲಿ ಸೋಮವಾರ ಕಾಲ್ನಡಿಗೆ ಜಾಥಾ ನಡೆಸಿದರು.</p>.<p>ಎಂ.ಎಸ್.ಪಾಳ್ಯದಿಂದ ಲಕ್ಷ್ಮಿಪುರ ವೃತ್ತದವರೆಗೆ ಜಾಥಾ ಸಾಗಿತು. ಕಾನ್ಶಿರಾಮ್ ನಗರ, ಲಕ್ಷ್ಮಿಪುರ, ವಡೇರಹಳ್ಳಿ, ಗುಣಿ ಅಗ್ರಹಾರ, ವಿಶ್ವನಾಥ್ ನಗರ, ಬೆಸ್ಟ್ ಕೌಂಟಿ ಹಾಗೂ ಸುತ್ತಮುತ್ತ ಪ್ರದೇಶಗಳ ನಿವಾಸಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.</p>.<p>‘ಫಲಕ ತೆರವು ಮಾಡಿದವರನ್ನು ಗಡಿಪಾರು ಮಾಡಿ’, ‘ಮೂಲ ಸೌಕರ್ಯ ಕಲ್ಪಿಸಿ’ ಸೇರಿದಂತೆ ಹಲವು ಘೋಷಣಾ ಫಲಕಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು.</p>.<p>‘ಕಾನ್ಶಿರಾಮ್ ನಗರ ಬಿಬಿಎಂಪಿ ವ್ಯಾಪ್ತಿಯಲ್ಲಿದೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ವಡೇರಹಳ್ಳಿ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯ, ಪಿಡಿಒ ಹಾಗೂ ಇತರರು ಸೇರಿಕೊಂಡು ಫಲಕ ತೆರವು ಮಾಡಿದ್ದಾರೆ. ಅದೇ ಜಾಗವನ್ನು ಅಕ್ರಮವಾಗಿ ಬೇರೆ ಫಲಕಗಳನ್ನು ನಿಲ್ಲಿಸಿದ್ದಾರೆ’ ಎಂದು ಪ್ರತಿಭಟನಕಾರರು ದೂರಿದರು.</p>.<p class="Subhead"><strong>ಮೂಲ ಸೌಕರ್ಯ ಕಲ್ಪಿಸಲು ಆಗ್ರಹ: </strong>‘ಕಾನ್ಶಿರಾಮ್ ನಗರ, ಲಕ್ಷ್ಮಿಪುರ, ವಡೇರಹಳ್ಳಿ, ಗುಣಿ ಅಗ್ರಹಾರ, ವಿಶ್ವನಾಥ್ ನಗರ, ಬೆಸ್ಟ್ ಕೌಂಟಿ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>‘ರಸ್ತೆ ಡಾಂಬರೀಕರಣ ಹಾಗೂ ಬೀದಿ ದೀಪ ವ್ಯವಸ್ಥೆ ಮಾಡಬೇಕು. ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡಬೇಕು. ನ್ಯಾಯಬೆಲೆ ಅಂಗಡಿಗಳನ್ನು ತೆರೆಯಬೇಕು’ ಎಂದೂ ಆಗ್ರಹಿಸಿದರು.</p>.<p>ಬಿಎಸ್ಪಿ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>