<p><strong>ಬೆಂಗಳೂರು:</strong>‘ಸಂಶೋಧನೆ ಮತ್ತು ಅಧ್ಯಯನ ಮಾಡಲು ಡಾ.ಬಿ.ಆರ್. ಅಂಬೇಡ್ಕರ್ ಅವರೇ ಪ್ರೇರಣೆ. ಅಂಬೇಡ್ಕರ್ ಅವರ ಸಾಹಿತ್ಯವನ್ನು ಓದದೇ ಇದ್ದಿದ್ದರೆ ನಾನು ಬರಹಗಾರನಾಗಲು ಮತ್ತು ಇತಿಹಾಸ ಪ್ರಾಧ್ಯಾಪಕನಾಗಲು ಸಾಧ್ಯವಾಗುತ್ತಿರಲಿಲ್ಲ’ ಎಂದು ಸಾಹಿತಿ ಮಹಾದೇವ ಶಂಕನಪುರ ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ಆಯೋಜಿಸಿದ್ದ ‘ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮದಲ್ಲಿ ಅವರು ತಮ್ಮ ಜೀವನ, ಸಾಹಿತ್ಯ ರಚನೆ, ಸಂಘಟನೆ, ಹೋರಾಟ ಮತ್ತು ಇತಿಹಾಸ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅನುಭವಗಳನ್ನು ಹಂಚಿಕೊಂಡರು.</p>.<p>‘ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳನ್ನು ಎಲ್ಲರೂ ಓದಬೇಕು. ಅದರಲ್ಲೂ ಬೋಧಕ ವೃತ್ತಿಯಲ್ಲಿರುವವರು ಕಡ್ಡಾಯವಾಗಿ ಅಧ್ಯಯನ ಮಾಡಬೇಕು. ಇದರಿಂದ, ಸಮಾಜದ ಬಗೆಗಿನ ದೃಷ್ಟಿಕೋನ ಬದಲಾಗುತ್ತದೆ’ ಎಂದು ಪ್ರತಿಪಾದಿಸಿದರು.</p>.<p>‘ಮೌಖಿಕ ಪರಂಪರೆಗೆ ಸಂಬಂಧಿಸಿದಂತೆ ಹೆಚ್ಚು ಕೆಲಸ ಮಾಡಿದ್ದೇನೆ. ದೇಶದ ಇತಿಹಾಸದಲ್ಲಿ ಇದುವರೆಗೆ ದಾಖಲಾಗದಿರುವ ಅಂಶಗಳು ಮತ್ತು ಕಳೆದು ಹೋಗಿರುವವರ ಬಗ್ಗೆ ಬರೆಯಬೇಕು ಎನ್ನುವ ಉದ್ದೇಶದಿಂದ ಸಂಶೋಧನೆ ಕೈಗೊಂಡಿದ್ದೇನೆ. ದಾಖಲಾಗದ ಅಂಶಗಳನ್ನು ದಾಖಲಿಸುವ ಕಾರ್ಯ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p>‘ದಲಿತ ಚಳವಳಿಗಾರರು ಮತ್ತು ಸಾಹಿತಿಗಳ ಒಡನಾಟವೂ ನನಗಿದೆ. ಅರೆಕಾಲಿಕ ಉಪನ್ಯಾಸಕನಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ವಿದ್ಯಾರ್ಥಿನಿಲಯ ಇರಲಿಲ್ಲ. ಆಗ ಮುಖ್ಯಮಂತ್ರಿಯಾಗಿದ್ದ ವಿರೇಂದ್ರ ಪಾಟೀಲ ಅವರ ಮನೆಗೆ ಬೆಳಿಗ್ಗೆ 5 ಗಂಟೆಗೆ ವಿದ್ಯಾರ್ಥಿಗಳು ಘೇರಾವ್ ಹಾಕಿದ್ದರು. ಈ ಹೋರಾಟದ ಬಳಿಕ ನಮ್ಮ ಕಾಲೇಜಿಗೆ ಹಾಗೂ ರಾಜ್ಯದಾದ್ಯಂತ ಹಲವು ವಿದ್ಯಾರ್ಥಿ ನಿಲಯಗಳನ್ನು ಸರ್ಕಾರ ಮಂಜೂರು ಮಾಡಿತ್ತು’ ಎಂದು ವಿವರಿಸಿದರು.</p>.<p>‘ಪ್ರಜಾವಾಣಿ ನನಗೆ ಪ್ರೇರಣೆ ನೀಡಿದ ಮತ್ತು ನನ್ನ ಮೇಲೆ ಪ್ರಭಾವ ಬೀರಿದ ದಿನಪತ್ರಿಕೆ. ಮೂರು ಬಾರಿ ‘ಪ್ರಜಾವಾಣಿ’ ಕಾವ್ಯ ಸ್ಪರ್ಧೆಯಲ್ಲಿ ಬಹುಮಾನ ಬಂದಿದೆ’ ಎಂದುಇದೇ ಸಂದರ್ಭದಲ್ಲಿನೆನಪಿಸಿಕೊಂಡರು.</p>.<p>‘ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಶಂಕನಪುರ ನಮ್ಮ ಊರು. ಕೊಳ್ಳೇಗಾಲ ವ್ಯಾಪಾರ, ಸಾಹಿತ್ಯ ಮತ್ತು ಜಾನಪದ ಸಂಸ್ಕೃತಿಗೆ ಪ್ರಸಿದ್ಧವಾಗಿದೆ. ಜಾನಪದ ಕ್ಷೇತ್ರಕ್ಕೆ ಚಾಮರಾಜನಗರ ಜಿಲ್ಲೆ ಅಪಾರ ಕೊಡುಗೆ ನೀಡಿದೆ’ ಎಂದು ವಿವರಿಸಿದರು.</p>.<p>‘ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಜನಪದ ತಜ್ಞರಿಂದ ಆಸಕ್ತ ಯುವಕರಿಗೆ ಶಿಬಿರಗಳ ಮೂಲಕ ತರಬೇತಿ ನೀಡಬೇಕು ಹಾಗೂ ಸಂರಕ್ಷಿಸುವ ಕಾರ್ಯಗಳು ನಡೆಯಬೇಕು’ ಎಂದು ಸಲಹೆ ನೀಡಿದರು.<br /></p>.<p><strong>‘ಸಂವಿಧಾನ ಅಧ್ಯಯನ ಕಡ್ಡಾಯ ಆಗಬೇಕು’</strong></p>.<p>‘ಪದವಿ ಹಂತದಲ್ಲಿ ಸಂವಿಧಾನದ ಬಗ್ಗೆ ಒಂದು ವಿಷಯವನ್ನು ಅಧ್ಯಯನ ಮಾಡುವುದನ್ನು ಸರ್ಕಾರ ಅಥವಾ ವಿಶ್ವವಿದ್ಯಾಲಯಗಳು ಕಡ್ಡಾಯಗೊಳಿಸಬೇಕು. ಇಂದಿನ ಪರಿಸ್ಥಿತಿಗೂ ಇದು ಅಗತ್ಯವಾಗಿದೆ’ ಎಂದು ಮಹಾದೇವ ಶಂಕನಪುರ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಸಂಶೋಧನೆ ಮತ್ತು ಅಧ್ಯಯನ ಮಾಡಲು ಡಾ.ಬಿ.ಆರ್. ಅಂಬೇಡ್ಕರ್ ಅವರೇ ಪ್ರೇರಣೆ. ಅಂಬೇಡ್ಕರ್ ಅವರ ಸಾಹಿತ್ಯವನ್ನು ಓದದೇ ಇದ್ದಿದ್ದರೆ ನಾನು ಬರಹಗಾರನಾಗಲು ಮತ್ತು ಇತಿಹಾಸ ಪ್ರಾಧ್ಯಾಪಕನಾಗಲು ಸಾಧ್ಯವಾಗುತ್ತಿರಲಿಲ್ಲ’ ಎಂದು ಸಾಹಿತಿ ಮಹಾದೇವ ಶಂಕನಪುರ ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ಆಯೋಜಿಸಿದ್ದ ‘ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮದಲ್ಲಿ ಅವರು ತಮ್ಮ ಜೀವನ, ಸಾಹಿತ್ಯ ರಚನೆ, ಸಂಘಟನೆ, ಹೋರಾಟ ಮತ್ತು ಇತಿಹಾಸ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅನುಭವಗಳನ್ನು ಹಂಚಿಕೊಂಡರು.</p>.<p>‘ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳನ್ನು ಎಲ್ಲರೂ ಓದಬೇಕು. ಅದರಲ್ಲೂ ಬೋಧಕ ವೃತ್ತಿಯಲ್ಲಿರುವವರು ಕಡ್ಡಾಯವಾಗಿ ಅಧ್ಯಯನ ಮಾಡಬೇಕು. ಇದರಿಂದ, ಸಮಾಜದ ಬಗೆಗಿನ ದೃಷ್ಟಿಕೋನ ಬದಲಾಗುತ್ತದೆ’ ಎಂದು ಪ್ರತಿಪಾದಿಸಿದರು.</p>.<p>‘ಮೌಖಿಕ ಪರಂಪರೆಗೆ ಸಂಬಂಧಿಸಿದಂತೆ ಹೆಚ್ಚು ಕೆಲಸ ಮಾಡಿದ್ದೇನೆ. ದೇಶದ ಇತಿಹಾಸದಲ್ಲಿ ಇದುವರೆಗೆ ದಾಖಲಾಗದಿರುವ ಅಂಶಗಳು ಮತ್ತು ಕಳೆದು ಹೋಗಿರುವವರ ಬಗ್ಗೆ ಬರೆಯಬೇಕು ಎನ್ನುವ ಉದ್ದೇಶದಿಂದ ಸಂಶೋಧನೆ ಕೈಗೊಂಡಿದ್ದೇನೆ. ದಾಖಲಾಗದ ಅಂಶಗಳನ್ನು ದಾಖಲಿಸುವ ಕಾರ್ಯ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p>‘ದಲಿತ ಚಳವಳಿಗಾರರು ಮತ್ತು ಸಾಹಿತಿಗಳ ಒಡನಾಟವೂ ನನಗಿದೆ. ಅರೆಕಾಲಿಕ ಉಪನ್ಯಾಸಕನಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ವಿದ್ಯಾರ್ಥಿನಿಲಯ ಇರಲಿಲ್ಲ. ಆಗ ಮುಖ್ಯಮಂತ್ರಿಯಾಗಿದ್ದ ವಿರೇಂದ್ರ ಪಾಟೀಲ ಅವರ ಮನೆಗೆ ಬೆಳಿಗ್ಗೆ 5 ಗಂಟೆಗೆ ವಿದ್ಯಾರ್ಥಿಗಳು ಘೇರಾವ್ ಹಾಕಿದ್ದರು. ಈ ಹೋರಾಟದ ಬಳಿಕ ನಮ್ಮ ಕಾಲೇಜಿಗೆ ಹಾಗೂ ರಾಜ್ಯದಾದ್ಯಂತ ಹಲವು ವಿದ್ಯಾರ್ಥಿ ನಿಲಯಗಳನ್ನು ಸರ್ಕಾರ ಮಂಜೂರು ಮಾಡಿತ್ತು’ ಎಂದು ವಿವರಿಸಿದರು.</p>.<p>‘ಪ್ರಜಾವಾಣಿ ನನಗೆ ಪ್ರೇರಣೆ ನೀಡಿದ ಮತ್ತು ನನ್ನ ಮೇಲೆ ಪ್ರಭಾವ ಬೀರಿದ ದಿನಪತ್ರಿಕೆ. ಮೂರು ಬಾರಿ ‘ಪ್ರಜಾವಾಣಿ’ ಕಾವ್ಯ ಸ್ಪರ್ಧೆಯಲ್ಲಿ ಬಹುಮಾನ ಬಂದಿದೆ’ ಎಂದುಇದೇ ಸಂದರ್ಭದಲ್ಲಿನೆನಪಿಸಿಕೊಂಡರು.</p>.<p>‘ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಶಂಕನಪುರ ನಮ್ಮ ಊರು. ಕೊಳ್ಳೇಗಾಲ ವ್ಯಾಪಾರ, ಸಾಹಿತ್ಯ ಮತ್ತು ಜಾನಪದ ಸಂಸ್ಕೃತಿಗೆ ಪ್ರಸಿದ್ಧವಾಗಿದೆ. ಜಾನಪದ ಕ್ಷೇತ್ರಕ್ಕೆ ಚಾಮರಾಜನಗರ ಜಿಲ್ಲೆ ಅಪಾರ ಕೊಡುಗೆ ನೀಡಿದೆ’ ಎಂದು ವಿವರಿಸಿದರು.</p>.<p>‘ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಗಳು ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಜನಪದ ತಜ್ಞರಿಂದ ಆಸಕ್ತ ಯುವಕರಿಗೆ ಶಿಬಿರಗಳ ಮೂಲಕ ತರಬೇತಿ ನೀಡಬೇಕು ಹಾಗೂ ಸಂರಕ್ಷಿಸುವ ಕಾರ್ಯಗಳು ನಡೆಯಬೇಕು’ ಎಂದು ಸಲಹೆ ನೀಡಿದರು.<br /></p>.<p><strong>‘ಸಂವಿಧಾನ ಅಧ್ಯಯನ ಕಡ್ಡಾಯ ಆಗಬೇಕು’</strong></p>.<p>‘ಪದವಿ ಹಂತದಲ್ಲಿ ಸಂವಿಧಾನದ ಬಗ್ಗೆ ಒಂದು ವಿಷಯವನ್ನು ಅಧ್ಯಯನ ಮಾಡುವುದನ್ನು ಸರ್ಕಾರ ಅಥವಾ ವಿಶ್ವವಿದ್ಯಾಲಯಗಳು ಕಡ್ಡಾಯಗೊಳಿಸಬೇಕು. ಇಂದಿನ ಪರಿಸ್ಥಿತಿಗೂ ಇದು ಅಗತ್ಯವಾಗಿದೆ’ ಎಂದು ಮಹಾದೇವ ಶಂಕನಪುರ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>