<p><strong>ಬೆಂಗಳೂರು</strong>: ‘ಭಾರತದ ಪ್ರತಿಯೊಬ್ಬ ಪ್ರಜೆಯ ಸಮಾನ ಹಕ್ಕುಗಳಿಗೆ ಹೋರಾಟ ಮಾಡಿದ ಅಂಬೇಡ್ಕರ್ ಅವರು ಒಂದೇ ಸಮುದಾಯಕ್ಕೆ ಸೀಮಿತರಾದವರಲ್ಲ’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.</p><p>ಜ್ಞಾನಜ್ಯೋತಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಅಂಬೇಡ್ಕರ್ ಅಧ್ಯಯನ ಕೇಂದ್ರ ಸಹಯೋಗದಲ್ಲಿ ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆ ನಗರ ಜಲ್ಲಾ ಘಟಕ ಏರ್ಪಡಿಸಿದ್ದ ಭೀಮ ಗಾಯನ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p><p>‘ಸಂವಿಧಾನ ಪೀಠಿಕೆಯು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಐಕ್ಯತೆ ಮತ್ತು ಭ್ರಾತೃತ್ವದ ಬದ್ಧತೆಯನ್ನು ಪ್ರತಿಪಾದಿಸುತ್ತದೆ. ಅಂಬೇಡ್ಕರ್ ರಚಿತ ಈ ಸಂವಿಧಾನದ ಪೀಠಿಕೆಯೇ ಅವರು ಒಬ್ಬ ವಿಶ್ವ ಮಾನವ ಎಂಬುದನ್ನು ಸಾಬೀತು ಪಡಿಸುತ್ತದೆ’ ಎಂದರು.</p><p>ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಮಾತನಾಡಿ, ‘ಸಾಮಾಜಿಕ ಹೋರಾಟಗಳಲ್ಲಿ ಹಾಡು ಪ್ರಬಲ ಸಾಧನವಾಗಿದ್ದವು. ಯುವ ಜನತೆಗೆ “ಭೀಮ ಗಾಯನ”ದ ಹಾಡುಗಳು ಅಂಬೇಡ್ಕರ್ ಅವರ ಬದುಕಿನ ಹೋರಾಟ, ಸಾಧನೆ ಬಗ್ಗೆ ಜಾಗೃತಿ ಮೂಡಿಸುತ್ತದೆ’ ಎಂದರು. </p><p>ಕುಲಪತಿ ಬಿ.ರಮೇಶ.ಬಿ, ಉಪ ನಿರ್ದೇಶಕಿ ಪಲ್ಲವಿ ಹೊನ್ನಾಪುರ, ಮುಖಂಡ ಮಾವಳ್ಳಿ ಶಂಕರ್, ಅಧ್ಯಯನ ಕೇಂದ್ರದ ನಿರ್ದೇಶಕಿ ಕೆ.ಆರ್.ಜಲಜಾ, ಸಿಂಡಿಕೇಟ್ ಸದಸ್ಯ ಫ್ರಾನ್ಸಿಸ್ ಉಪಸ್ಥಿತರಿದ್ದರು.</p><p>ಮೈಸೂರಿನ ʼಅಮ್ಮ ವಸುಂಧರೆ ಕಾಲತಂಡʼದ ಕಲಾವಿದರು ಕಾರ್ಯಕ್ರಮ ಪ್ರಸ್ತುತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಭಾರತದ ಪ್ರತಿಯೊಬ್ಬ ಪ್ರಜೆಯ ಸಮಾನ ಹಕ್ಕುಗಳಿಗೆ ಹೋರಾಟ ಮಾಡಿದ ಅಂಬೇಡ್ಕರ್ ಅವರು ಒಂದೇ ಸಮುದಾಯಕ್ಕೆ ಸೀಮಿತರಾದವರಲ್ಲ’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.</p><p>ಜ್ಞಾನಜ್ಯೋತಿ ಸಭಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಅಂಬೇಡ್ಕರ್ ಅಧ್ಯಯನ ಕೇಂದ್ರ ಸಹಯೋಗದಲ್ಲಿ ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆ ನಗರ ಜಲ್ಲಾ ಘಟಕ ಏರ್ಪಡಿಸಿದ್ದ ಭೀಮ ಗಾಯನ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p><p>‘ಸಂವಿಧಾನ ಪೀಠಿಕೆಯು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಐಕ್ಯತೆ ಮತ್ತು ಭ್ರಾತೃತ್ವದ ಬದ್ಧತೆಯನ್ನು ಪ್ರತಿಪಾದಿಸುತ್ತದೆ. ಅಂಬೇಡ್ಕರ್ ರಚಿತ ಈ ಸಂವಿಧಾನದ ಪೀಠಿಕೆಯೇ ಅವರು ಒಬ್ಬ ವಿಶ್ವ ಮಾನವ ಎಂಬುದನ್ನು ಸಾಬೀತು ಪಡಿಸುತ್ತದೆ’ ಎಂದರು.</p><p>ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಮಾತನಾಡಿ, ‘ಸಾಮಾಜಿಕ ಹೋರಾಟಗಳಲ್ಲಿ ಹಾಡು ಪ್ರಬಲ ಸಾಧನವಾಗಿದ್ದವು. ಯುವ ಜನತೆಗೆ “ಭೀಮ ಗಾಯನ”ದ ಹಾಡುಗಳು ಅಂಬೇಡ್ಕರ್ ಅವರ ಬದುಕಿನ ಹೋರಾಟ, ಸಾಧನೆ ಬಗ್ಗೆ ಜಾಗೃತಿ ಮೂಡಿಸುತ್ತದೆ’ ಎಂದರು. </p><p>ಕುಲಪತಿ ಬಿ.ರಮೇಶ.ಬಿ, ಉಪ ನಿರ್ದೇಶಕಿ ಪಲ್ಲವಿ ಹೊನ್ನಾಪುರ, ಮುಖಂಡ ಮಾವಳ್ಳಿ ಶಂಕರ್, ಅಧ್ಯಯನ ಕೇಂದ್ರದ ನಿರ್ದೇಶಕಿ ಕೆ.ಆರ್.ಜಲಜಾ, ಸಿಂಡಿಕೇಟ್ ಸದಸ್ಯ ಫ್ರಾನ್ಸಿಸ್ ಉಪಸ್ಥಿತರಿದ್ದರು.</p><p>ಮೈಸೂರಿನ ʼಅಮ್ಮ ವಸುಂಧರೆ ಕಾಲತಂಡʼದ ಕಲಾವಿದರು ಕಾರ್ಯಕ್ರಮ ಪ್ರಸ್ತುತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>