<p><strong>ಬೆಂಗಳೂರು</strong>: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ‘ಅಂಬೇಡ್ಕರ್ ಥೀಂ ಪಾರ್ಕ್’ ನಿರ್ಮಿಸುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವ ಸಲ್ಲಿಸಿದೆ.</p>.<p>ಮುಖ್ಯಮಂತ್ರಿಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮತ್ತು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಈ ಪ್ರಸ್ತಾವದ ಬಗ್ಗೆ ಚರ್ಚಿಸಿದ್ದಾರೆ.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಮಹಾದ್ವಾರ (ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿರುವ ಪ್ರವೇಶದ್ವಾರ) ಮತ್ತು ಜ್ಞಾನಭಾರತಿ ಆವರಣದ ಎನ್ಎಸ್ಎಸ್ ಭವನದ ನಡುವೆ ಥೀಂ ಪಾರ್ಕ್ ನಿರ್ಮಿಸಲು 25 ಎಕರೆ ಜಾಗವನ್ನು ಗುರುತಿಸಲಾಗಿದೆ.</p>.<p>ಈ ಜಾಗವು ವಿಶ್ವವಿದ್ಯಾಲಯದ ಆವರಣದಲ್ಲಿ ಇರುವುದರಿಂದ ಉನ್ನತ ಶಿಕ್ಷಣ ಇಲಾಖೆಯ ಸುಪರ್ದಿಗೆ ಬರುತ್ತದೆ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿ, 25 ಎಕರೆ ಜಾಗವನ್ನು ಹಸ್ತಾಂತರಿಸಲು ಕ್ರಮ ತೆಗೆದುಕೊಳ್ಳಬೇಕು. ಅಂಬೇಡ್ಕರ್ ಥೀಂ ಪಾರ್ಕ್ ಸ್ಥಾಪನೆಗೆ ಪ್ರಸಕ್ತ ಆರ್ಥಿಕ ವರ್ಷದಲ್ಲೇ ₹200 ಕೋಟಿ ಮೀಸಲಿಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯು ಕೋರಿದೆ.</p>.<p>ಏನೇನಿರಲಿದೆ... * ಅಂಬೇಡ್ಕರ್ ಅವರ 200 ಅಡಿ ಎತ್ತರದ ಪ್ರತಿಮೆ * ಅಂಬೇಡ್ಕರ್ ಅವರ ಬದುಕು ಬರಹ ಸಾಧನೆ ಹಾಗೂ ಭಾರತ ಸಂವಿಧಾನ ರಚನೆಯ ಇತಿಹಾಸದ ವಸ್ತು ಸಂಗ್ರಹಾಲಯ * ಅಂಬೇಡ್ಕರ್ ಸ್ಮಾರಕ ಬೃಹತ್ ಗ್ರಂಥಾಲಯ * ಬೌದ್ಧ ಸ್ತೂಪ ಮತ್ತು ವಿವಿಧ ಶಿಲ್ಪ ಕಲಾಕೃತಿಗಳು * ಸಮ್ಮೇಳನ ಸಭಾಂಗಣ ಕಿರು ಚಿತ್ರಮಂದಿರ * ಉದ್ಯಾನವನ ಸಂಗೀತ ಕಾರಂಜಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ‘ಅಂಬೇಡ್ಕರ್ ಥೀಂ ಪಾರ್ಕ್’ ನಿರ್ಮಿಸುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವ ಸಲ್ಲಿಸಿದೆ.</p>.<p>ಮುಖ್ಯಮಂತ್ರಿಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮತ್ತು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಈ ಪ್ರಸ್ತಾವದ ಬಗ್ಗೆ ಚರ್ಚಿಸಿದ್ದಾರೆ.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಮಹಾದ್ವಾರ (ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿರುವ ಪ್ರವೇಶದ್ವಾರ) ಮತ್ತು ಜ್ಞಾನಭಾರತಿ ಆವರಣದ ಎನ್ಎಸ್ಎಸ್ ಭವನದ ನಡುವೆ ಥೀಂ ಪಾರ್ಕ್ ನಿರ್ಮಿಸಲು 25 ಎಕರೆ ಜಾಗವನ್ನು ಗುರುತಿಸಲಾಗಿದೆ.</p>.<p>ಈ ಜಾಗವು ವಿಶ್ವವಿದ್ಯಾಲಯದ ಆವರಣದಲ್ಲಿ ಇರುವುದರಿಂದ ಉನ್ನತ ಶಿಕ್ಷಣ ಇಲಾಖೆಯ ಸುಪರ್ದಿಗೆ ಬರುತ್ತದೆ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿ, 25 ಎಕರೆ ಜಾಗವನ್ನು ಹಸ್ತಾಂತರಿಸಲು ಕ್ರಮ ತೆಗೆದುಕೊಳ್ಳಬೇಕು. ಅಂಬೇಡ್ಕರ್ ಥೀಂ ಪಾರ್ಕ್ ಸ್ಥಾಪನೆಗೆ ಪ್ರಸಕ್ತ ಆರ್ಥಿಕ ವರ್ಷದಲ್ಲೇ ₹200 ಕೋಟಿ ಮೀಸಲಿಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯು ಕೋರಿದೆ.</p>.<p>ಏನೇನಿರಲಿದೆ... * ಅಂಬೇಡ್ಕರ್ ಅವರ 200 ಅಡಿ ಎತ್ತರದ ಪ್ರತಿಮೆ * ಅಂಬೇಡ್ಕರ್ ಅವರ ಬದುಕು ಬರಹ ಸಾಧನೆ ಹಾಗೂ ಭಾರತ ಸಂವಿಧಾನ ರಚನೆಯ ಇತಿಹಾಸದ ವಸ್ತು ಸಂಗ್ರಹಾಲಯ * ಅಂಬೇಡ್ಕರ್ ಸ್ಮಾರಕ ಬೃಹತ್ ಗ್ರಂಥಾಲಯ * ಬೌದ್ಧ ಸ್ತೂಪ ಮತ್ತು ವಿವಿಧ ಶಿಲ್ಪ ಕಲಾಕೃತಿಗಳು * ಸಮ್ಮೇಳನ ಸಭಾಂಗಣ ಕಿರು ಚಿತ್ರಮಂದಿರ * ಉದ್ಯಾನವನ ಸಂಗೀತ ಕಾರಂಜಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>