<p><strong>ಕೆಂಗೇರಿ:</strong> 'ಮನುಷ್ಯರು ಪರಸ್ಪರ ಪ್ರೀತಿಯಿಂದ ಬದುಕಬೇಕು. ತಾವು ಸ್ವತಂತ್ರವಾಗಿ ಬದುಕಿ ಮತ್ತೊಬ್ಬರಿಗೂ ಬದುಕುವ ಪರಿಸರವನ್ನು ಸೃಷ್ಟಿಸಿಕೊಡಬೇಕು. ಅದುವೇ ಅಂಬೇಡ್ಕರ್ ವಾದ’ ಎಂದು ಹಿರಿಯ ಚಿಂತಕ ಶಿವಶಂಕರ್ ಅಭಿಪ್ರಾಯಪಟ್ಟರು.</p>.<p>ಕೆಂಗೇರಿ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಂಬೇಡ್ಕರ್ ಯಾವುದೇ ಜನಾಂಗಕ್ಕೆ, ವಿಚಾರಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಮಾನವೀಯ ಮೌಲ್ಯಗಳನ್ನು ಬಿತ್ತಿದ್ದ ಮನುಜಧರ್ಮ ಪ್ರವರ್ತಕರಾಗಿದ್ದರು. ಜನ ಸಂಸ್ಕೃತಿಯ ನಿಜ ವಾರಸುದಾರರಾದ ಅಂಬೇಡ್ಕರರ ಬದುಕು ಬರಹಗಳನ್ನು ಯುವಜನಾಂಗಕ್ಕೆ ದಾಟಿಸಬೇಕಿದೆ ಎಂದರು.</p>.<p>ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ ಕೃಷ್ಣ ಮಾತನಾಡಿ, ‘ಹಿಂದೂ ಕೋಡ್ ಬಿಲ್ ಮೂಲಕ ಸಮಸ್ತ ಸ್ತ್ರೀಕುಲದ ಅಭ್ಯುದಯಕ್ಕೆ ಶ್ರಮಿಸಿದ ಅಂಬೇಡ್ಕರ್ ಅವರನ್ನು ಕೇವಲ ದಲಿತರೆಂದು ಅರ್ಥೈಸಬಾರದು’ ಎಂದು ಹೇಳಿದರು.</p>.<p>ಯುವ ಜನಾಂಗಕ್ಕೆ ಈ ದೇಶದ ಇತಿಹಾಸ, ಸಂವಿಧಾನದ ಬಗ್ಗೆ ಅರಿವು ಇರಬೇಕು. ಈ ನಿಟ್ಟಿನಲ್ಲಿ ‘ಅಂಬೇಡ್ಕರ್ ಓದು’ವಿನಂತಹ ಕಾರ್ಯಕ್ರಮಗಳು ಅತ್ಯಂತ ಅವಶ್ಯವಾಗಿವೆ ಎಂದು ಹೇಳಿದರು.</p>.<p>ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಸುರೇಶ್ ಗೌತಮ್ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> 'ಮನುಷ್ಯರು ಪರಸ್ಪರ ಪ್ರೀತಿಯಿಂದ ಬದುಕಬೇಕು. ತಾವು ಸ್ವತಂತ್ರವಾಗಿ ಬದುಕಿ ಮತ್ತೊಬ್ಬರಿಗೂ ಬದುಕುವ ಪರಿಸರವನ್ನು ಸೃಷ್ಟಿಸಿಕೊಡಬೇಕು. ಅದುವೇ ಅಂಬೇಡ್ಕರ್ ವಾದ’ ಎಂದು ಹಿರಿಯ ಚಿಂತಕ ಶಿವಶಂಕರ್ ಅಭಿಪ್ರಾಯಪಟ್ಟರು.</p>.<p>ಕೆಂಗೇರಿ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಂಬೇಡ್ಕರ್ ಯಾವುದೇ ಜನಾಂಗಕ್ಕೆ, ವಿಚಾರಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಮಾನವೀಯ ಮೌಲ್ಯಗಳನ್ನು ಬಿತ್ತಿದ್ದ ಮನುಜಧರ್ಮ ಪ್ರವರ್ತಕರಾಗಿದ್ದರು. ಜನ ಸಂಸ್ಕೃತಿಯ ನಿಜ ವಾರಸುದಾರರಾದ ಅಂಬೇಡ್ಕರರ ಬದುಕು ಬರಹಗಳನ್ನು ಯುವಜನಾಂಗಕ್ಕೆ ದಾಟಿಸಬೇಕಿದೆ ಎಂದರು.</p>.<p>ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ ಕೃಷ್ಣ ಮಾತನಾಡಿ, ‘ಹಿಂದೂ ಕೋಡ್ ಬಿಲ್ ಮೂಲಕ ಸಮಸ್ತ ಸ್ತ್ರೀಕುಲದ ಅಭ್ಯುದಯಕ್ಕೆ ಶ್ರಮಿಸಿದ ಅಂಬೇಡ್ಕರ್ ಅವರನ್ನು ಕೇವಲ ದಲಿತರೆಂದು ಅರ್ಥೈಸಬಾರದು’ ಎಂದು ಹೇಳಿದರು.</p>.<p>ಯುವ ಜನಾಂಗಕ್ಕೆ ಈ ದೇಶದ ಇತಿಹಾಸ, ಸಂವಿಧಾನದ ಬಗ್ಗೆ ಅರಿವು ಇರಬೇಕು. ಈ ನಿಟ್ಟಿನಲ್ಲಿ ‘ಅಂಬೇಡ್ಕರ್ ಓದು’ವಿನಂತಹ ಕಾರ್ಯಕ್ರಮಗಳು ಅತ್ಯಂತ ಅವಶ್ಯವಾಗಿವೆ ಎಂದು ಹೇಳಿದರು.</p>.<p>ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಸುರೇಶ್ ಗೌತಮ್ ಮಾತನಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>