ಬೆಂಗಳೂರು: ‘ಆ್ಯಂಬಿಡೆಂಟ್’ ಕಂಪನಿ ವಂಚನೆ ಪ್ರಕರಣದ ಐದನೇ ಆರೋಪಿಆಲಿಖಾನ್ಗೆ ನಗರದ 1ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅರ್ಜಿದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಜಗದೀಶ್, ‘₹1 ಲಕ್ಷಕ್ಕೆ ಬಾಂಡ್ ನೀಡಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ತನಿಖೆಗೆ ಸಹಕರಿಸಬೇಕು’ ಎಂಬ ಷರತ್ತು ವಿಧಿಸಿ ಆದೇಶ ಹೊರಡಿಸಿದರು.
ಅರ್ಜಿದಾರರ ಪರ ವಕೀಲ ಆರ್.ಪಿ.ಚಂದ್ರಶೇಖರ್, ‘ಇದು ಮೋಸದ ಪ್ರಕರಣ. ಆಲಿಖಾನ್ ವಿರುದ್ಧ ಯಾರೊಬ್ಬರೂ ದೂರು ಕೊಟ್ಟಿಲ್ಲ. ಪ್ರಕರಣದಲ್ಲಿ ಅರ್ಜಿದಾರರ ಪಾತ್ರವೂ ಇಲ್ಲ’ ಎಂದು ವಾದಿಸಿದ್ದರು.