<p><strong>ಬೆಂಗಳೂರು: </strong>ಆಕ್ಸಿಜನ್ ಇಲ್ಲವೆಂಬ ಕಾರಣಕ್ಕೆ ರೋಗಿಯ ಸಂಬಂಧಿಕರು, ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಚಾಲಕ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>ಭಾರತಿನಗರದ ತಿಮ್ಮಯ್ಯ ಬಡಾವಣೆ 75 ವರ್ಷದ ಅನ್ಸರ್ ಎಂಬುವರು ತೀವ್ರ ಉಸಿರಾಟ ತೊಂದರೆಯಿಂದ ಬಳುತ್ತಿದ್ದರು. ಸಂಬಂಧಿಕರು ತುರ್ತು ಕರೆ ಮಾಡಿ ಆ್ಯಂಬುಲೆನ್ಸ್ ಕರೆಸಿಕೊಂಡಿದ್ದರು.</p>.<p>ಸ್ಥಳಕ್ಕೆ ಆಂಬುಲೆನ್ಸ್ ತಂದಿದ್ದ ಚಾಲಕ ಯೋಗೇಶ್ವರ್, ಅನ್ಸರ್ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆ ತಲುಪಿ 20 ನಿಮಿಷವಾದರೂ ಬೆಡ್ ಇಲ್ಲದ ಕಾರಣಕ್ಕೆ ದಾಖಲಿಸಿಕೊಂಡಿರಲಿಲ್ಲ. ಉಸಿರಾಟ ತೊಂದರೆ ತೀವ್ರಗೊಂಡು ಆಂಬುಲೆನ್ಸ್ನಲ್ಲೇ ಅನ್ಸರ್ ಸಾವನ್ನಪ್ಪಿದ್ದರು.</p>.<p>ಅದರಿಂದ ಅಕ್ರೋಶಗೊಂಡ ರೋಗಿಯ ಸಂಬಂಧಿಕರು, ‘ಆ್ಯಂಬುಲೆನ್ಸ್ನಲ್ಲಿ ಆಕ್ಸಿಜನ್ ಏಕಿಲ್ಲ’ ಎಂದು ಪ್ರಶ್ನಿಸಿ ಚಾಲಕನ ಜೊತೆ ಜಗಳ ತೆಗೆದರು. ಆಂಬುಲೆನ್ಸ್ನಿಂದ ಚಾಲಕನನ್ನು ಹೊರಗೆ ಎಳೆದು ಹಲ್ಲೆ ಸಹ ಮಾಡಿದ್ದಾರೆ. ಹಲ್ಲೆ ವಿಡಿಯೊವನ್ನು ಸಾರ್ವಜನಿಕರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.</p>.<p>ಮೃತ ಅನ್ಸರ್ ಅವರನ್ನು ಗಂಟಲಿನ ದ್ರವ ಸಂಗ್ರಹಿಸಿರುವ ವೈದ್ಯರು, ಕೊರೊನಾ ಪರೀಕ್ಷೆಗಾಗಿ ಕಳುಹಿಸಿದ್ದಾರೆ.</p>.<p class="Subhead">ಸಚಿವ ಸುಧಾಕರ್ ಅಸಮಾಧಾನ; ಆಂಬುಲೆನ್ಸ್ ಚಾಲಕನ ಮೇಲಿನ ಹಲ್ಲೆ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ‘ಕರ್ತವ್ಯ ನಿರ್ವಹಿಸಿದ ಚಾಲಕನ ಮೇಲೆ ಹಲ್ಲೆ ನಿಜಕ್ಕೂ ಅಮಾನವೀಯ ವರ್ತನೆ. ಚಾಲಕ ಆಸ್ಪತ್ರೆಗೆ ದಾಖಲಿಸಲು ರೋಗಿಯನ್ನು ಕರೆತಂದರೆ ಈ ರೀತಿ ಹಲ್ಲೆ ಮಾಡಿರುವುದು ಸರಿಯಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆಕ್ಸಿಜನ್ ಇಲ್ಲವೆಂಬ ಕಾರಣಕ್ಕೆ ರೋಗಿಯ ಸಂಬಂಧಿಕರು, ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಚಾಲಕ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>ಭಾರತಿನಗರದ ತಿಮ್ಮಯ್ಯ ಬಡಾವಣೆ 75 ವರ್ಷದ ಅನ್ಸರ್ ಎಂಬುವರು ತೀವ್ರ ಉಸಿರಾಟ ತೊಂದರೆಯಿಂದ ಬಳುತ್ತಿದ್ದರು. ಸಂಬಂಧಿಕರು ತುರ್ತು ಕರೆ ಮಾಡಿ ಆ್ಯಂಬುಲೆನ್ಸ್ ಕರೆಸಿಕೊಂಡಿದ್ದರು.</p>.<p>ಸ್ಥಳಕ್ಕೆ ಆಂಬುಲೆನ್ಸ್ ತಂದಿದ್ದ ಚಾಲಕ ಯೋಗೇಶ್ವರ್, ಅನ್ಸರ್ ಅವರನ್ನು ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆ ತಲುಪಿ 20 ನಿಮಿಷವಾದರೂ ಬೆಡ್ ಇಲ್ಲದ ಕಾರಣಕ್ಕೆ ದಾಖಲಿಸಿಕೊಂಡಿರಲಿಲ್ಲ. ಉಸಿರಾಟ ತೊಂದರೆ ತೀವ್ರಗೊಂಡು ಆಂಬುಲೆನ್ಸ್ನಲ್ಲೇ ಅನ್ಸರ್ ಸಾವನ್ನಪ್ಪಿದ್ದರು.</p>.<p>ಅದರಿಂದ ಅಕ್ರೋಶಗೊಂಡ ರೋಗಿಯ ಸಂಬಂಧಿಕರು, ‘ಆ್ಯಂಬುಲೆನ್ಸ್ನಲ್ಲಿ ಆಕ್ಸಿಜನ್ ಏಕಿಲ್ಲ’ ಎಂದು ಪ್ರಶ್ನಿಸಿ ಚಾಲಕನ ಜೊತೆ ಜಗಳ ತೆಗೆದರು. ಆಂಬುಲೆನ್ಸ್ನಿಂದ ಚಾಲಕನನ್ನು ಹೊರಗೆ ಎಳೆದು ಹಲ್ಲೆ ಸಹ ಮಾಡಿದ್ದಾರೆ. ಹಲ್ಲೆ ವಿಡಿಯೊವನ್ನು ಸಾರ್ವಜನಿಕರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.</p>.<p>ಮೃತ ಅನ್ಸರ್ ಅವರನ್ನು ಗಂಟಲಿನ ದ್ರವ ಸಂಗ್ರಹಿಸಿರುವ ವೈದ್ಯರು, ಕೊರೊನಾ ಪರೀಕ್ಷೆಗಾಗಿ ಕಳುಹಿಸಿದ್ದಾರೆ.</p>.<p class="Subhead">ಸಚಿವ ಸುಧಾಕರ್ ಅಸಮಾಧಾನ; ಆಂಬುಲೆನ್ಸ್ ಚಾಲಕನ ಮೇಲಿನ ಹಲ್ಲೆ ಬಗ್ಗೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ‘ಕರ್ತವ್ಯ ನಿರ್ವಹಿಸಿದ ಚಾಲಕನ ಮೇಲೆ ಹಲ್ಲೆ ನಿಜಕ್ಕೂ ಅಮಾನವೀಯ ವರ್ತನೆ. ಚಾಲಕ ಆಸ್ಪತ್ರೆಗೆ ದಾಖಲಿಸಲು ರೋಗಿಯನ್ನು ಕರೆತಂದರೆ ಈ ರೀತಿ ಹಲ್ಲೆ ಮಾಡಿರುವುದು ಸರಿಯಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>