<p><strong>ಬೆಂಗಳೂರು:</strong> ಅತ್ಯಾಧುನಿಕ ತಂತ್ರ ಜ್ಞಾನ ಆಧಾರಿತ ಆಂಬುಲೆನ್ಸ್ ನಿರ್ವ ಹಣಾ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿನ ಟೆಂಡರ್ ಪ್ರಕ್ರಿಯೆ ಪೂರ್ಣ ಗೊಳಿಸುವುದಕ್ಕೆ ಸಂಬಂಧಿಸಿದ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸಲ್ಲಿಸಿದೆ.</p>.<p>ಈ ಕುರಿತಂತೆ ‘ಭಾರತ್ ಪುನರುತ್ಥಾನ ಟ್ರಸ್ಟ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಹೆಚ್ಚುವರಿ ಸರ್ಕಾರಿ ವಕೀಲ ವಿಜಯಕುಮಾರ್ ಎ.ಪಾಟೀಲ, ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಸಲ್ಲಿಸಿರುವ ವೇಳಾಪಟ್ಟಿಯನ್ನು ನ್ಯಾಯಪೀಠಕ್ಕೆ ನೀಡಿದರು.</p>.<p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಯೋಜನೆ ಜಾರಿಗೆ ವಿಳಂಬ ಮಾಡದಂತೆ, ವೇಳಾಪಟ್ಟಿಗೆ ಬದ್ಧವಾಗಿರಬೇಕು. ಟೆಂಡರ್ ಪ್ರಕ್ರಿಯೆಯ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸಬೇಕು‘ ಎಂದು ನಿರ್ದೇಶಿಸಿ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ.</p>.<p class="Subhead">ವೇಳಾಪಟ್ಟಿಯಲ್ಲಿ ಏನಿದೆ?: 'ಪೂರ್ವ ಟೆಂಡರ್ ಪರಿಶೀಲನಾ ಸಮಿತಿಯಿಂದ 2022ರ ಆಗಸ್ಟ್ 29ರೊಳಗೆ ಅನು ಮೋದನೆ ಸಿಗುವ ಸಾಧ್ಯತೆಯಿದೆ. ಆಗಸ್ಟ್ 30ರಂದು ಟೆಂಡರ್ ಆಹ್ವಾನಿ ಸಲಾಗುವುದು.ಅ.17ರಂದು ದರ ಪ್ರಸ್ತಾವನೆ ಆರಂ ಭಿಸಿ, ನಂತರದ 15 ದಿನದಲ್ಲಿ ಯಶಸ್ವಿ ಸೇವಾದಾರರಿಗೆ ಕೋರಿಕೆ ಪತ್ರ ನೀಡಲಾಗುವುದು’ ಎಂದು ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅತ್ಯಾಧುನಿಕ ತಂತ್ರ ಜ್ಞಾನ ಆಧಾರಿತ ಆಂಬುಲೆನ್ಸ್ ನಿರ್ವ ಹಣಾ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿನ ಟೆಂಡರ್ ಪ್ರಕ್ರಿಯೆ ಪೂರ್ಣ ಗೊಳಿಸುವುದಕ್ಕೆ ಸಂಬಂಧಿಸಿದ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸಲ್ಲಿಸಿದೆ.</p>.<p>ಈ ಕುರಿತಂತೆ ‘ಭಾರತ್ ಪುನರುತ್ಥಾನ ಟ್ರಸ್ಟ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಹೆಚ್ಚುವರಿ ಸರ್ಕಾರಿ ವಕೀಲ ವಿಜಯಕುಮಾರ್ ಎ.ಪಾಟೀಲ, ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಸಲ್ಲಿಸಿರುವ ವೇಳಾಪಟ್ಟಿಯನ್ನು ನ್ಯಾಯಪೀಠಕ್ಕೆ ನೀಡಿದರು.</p>.<p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಯೋಜನೆ ಜಾರಿಗೆ ವಿಳಂಬ ಮಾಡದಂತೆ, ವೇಳಾಪಟ್ಟಿಗೆ ಬದ್ಧವಾಗಿರಬೇಕು. ಟೆಂಡರ್ ಪ್ರಕ್ರಿಯೆಯ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸಬೇಕು‘ ಎಂದು ನಿರ್ದೇಶಿಸಿ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ.</p>.<p class="Subhead">ವೇಳಾಪಟ್ಟಿಯಲ್ಲಿ ಏನಿದೆ?: 'ಪೂರ್ವ ಟೆಂಡರ್ ಪರಿಶೀಲನಾ ಸಮಿತಿಯಿಂದ 2022ರ ಆಗಸ್ಟ್ 29ರೊಳಗೆ ಅನು ಮೋದನೆ ಸಿಗುವ ಸಾಧ್ಯತೆಯಿದೆ. ಆಗಸ್ಟ್ 30ರಂದು ಟೆಂಡರ್ ಆಹ್ವಾನಿ ಸಲಾಗುವುದು.ಅ.17ರಂದು ದರ ಪ್ರಸ್ತಾವನೆ ಆರಂ ಭಿಸಿ, ನಂತರದ 15 ದಿನದಲ್ಲಿ ಯಶಸ್ವಿ ಸೇವಾದಾರರಿಗೆ ಕೋರಿಕೆ ಪತ್ರ ನೀಡಲಾಗುವುದು’ ಎಂದು ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>