ಇಲಾಖೆಯ ಅಧಿಕಾರಿಗಳು ಹಾಗೂ ಐಟಿ ಕಂಪನಿಗಳ ಮುಖ್ಯಸ್ಥರ ಜತೆಗೆ ಶುಕ್ರವಾರ ಸಭೆ ನಡೆಸಿದ ಅವರು, ‘ತುರ್ತು ಆರೋಗ್ಯ ಸೇವೆ ನೀಡುವ ಆಂಬುಲೆನ್ಸ್ಗಳ ಸೇವೆ ಮಹತ್ವ ದ್ದಾಗಿದೆ. ಸದ್ಯ ನಮ್ಮಲ್ಲಿರುವ ವ್ಯವಸ್ಥೆಯಲ್ಲಿ ಸಾಕಷ್ಟು ಲೋಪಗಳಿದ್ದು, ಅವುಗಳನ್ನು ನಿವಾರಿಸಬೇಕಿದೆ. ಆಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಗುಣಮಟ್ಟದ ನಿರ್ವಹಣಾ ಪದ್ಧತಿ ಅಳವಡಿಸಿಕೊಳ್ಳಬೇಕಿದೆ. ಒಂದು ಲಕ್ಷ ಜನಸಂಖ್ಯೆಯನ್ನು ಮಾನದಂಡವಾಗಿ ಇಟ್ಟುಕೊಳ್ಳುವ ಬದಲಿಗೆ, ಭೌಗೋಳಿಕ ಸವಾಲು ಮತ್ತು ಸಮಸ್ಯೆಗಳನ್ನು ಗಮನದಲ್ಲಿಟ್ಟು
ಕೊಂಡು ಕರಾರು ವಿಧಿಸಬೇಕು. ದೂರವಾಣಿ ಕರೆ ಮತ್ತು ಸಂದೇಶ ಬಂದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿ, ರೋಗಿಯನ್ನು ಕರೆದೊಯ್ಯುವಂತಾಗಬೇಕು’ ಎಂದರು.