<p><strong>ಬೆಂಗಳೂರು:</strong> ಕೊರೊನಾ ಸೋಂಕಿತರನ್ನು ಕರೆದೊಯ್ಯುವ ಆಂಬುಲೆನ್ಸ್ಗಳ ಸಂಚಾರಕ್ಕೆ ‘ಸಿಗ್ನಲ್ ಮುಕ್ತ’ ದಾರಿ ಮಾಡಿಕೊಡಲು ನಗರದ ಪೊಲೀಸರು ಸಿದ್ಧವಾಗಿದ್ದು, ಅಗತ್ಯವಿರುವವರು ನಿಯಂತ್ರಣ ಕೊಠಡಿ ಸಂಪರ್ಕಿಸುವಂತೆ ಅಧಿಕಾರಿಗಳು ಕೋರಿದ್ದಾರೆ.</p>.<p>ಲಾಕ್ಡೌನ್ ಸಡಿಲಿಕೆ ನಂತರ ನಗರದಲ್ಲಿ ವಾಹನಗಳ ಓಡಾಟ ಹೆಚ್ಚಾಗಿದೆ. ಜೊತೆಗೆ, ಕೊರೊನಾ ಪ್ರಕರಣಗಳ ಸಂಖ್ಯೆಯೇ ಏರುತ್ತಿದೆ. ಇಂಥ ಸಂದರ್ಭದಲ್ಲಿ ಸೋಂಕಿತರನ್ನು ಕರೆದೊಯ್ಯುವ ಆಂಬುಲೆನ್ಸ್ಗಳು ಕೆಲವೆಡೆ ದಟ್ಟಣೆಯಲ್ಲಿ ಸಿಲುಕುತ್ತಿವೆ. ಸೋಂಕಿತರು ಆಸ್ಪತ್ರೆ ತಲುಪುವುದು ತಡವಾಗುತ್ತಿದೆ.</p>.<p>ಇಂಥ ದಟ್ಟಣೆ ಸಂದರ್ಭದಲ್ಲಿ ಆಂಬುಲೆನ್ಸ್ಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡುವುದಾಗಿ ಪೊಲೀಸರು ಹೇಳಿದ್ದಾರೆ.</p>.<p>‘ಸರ್ಕಾರಿ ಅಥವಾ ಖಾಸಗಿ ಆಂಬುಲೆನ್ಸ್ಗಳ ತ್ವರಿತ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ನಾವು ಸಿದ್ಧರಾಗಿದ್ದೇವೆ. ಆಂಬುಲೆನ್ಸ್ಗಳ ಬಗ್ಗೆ ಮಾಹಿತಿ ನೀಡಿದರೆ ತುರ್ತಾಗಿ ಸ್ಪಂದಿಸಿ ರಸ್ತೆಯುದ್ದಕ್ಕೂ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಿದ್ದೇವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ನಿಯಂತ್ರಣ ಕೊಠಡಿ–100, 080–22943131, 22943030, 22943663 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕಿತರನ್ನು ಕರೆದೊಯ್ಯುವ ಆಂಬುಲೆನ್ಸ್ಗಳ ಸಂಚಾರಕ್ಕೆ ‘ಸಿಗ್ನಲ್ ಮುಕ್ತ’ ದಾರಿ ಮಾಡಿಕೊಡಲು ನಗರದ ಪೊಲೀಸರು ಸಿದ್ಧವಾಗಿದ್ದು, ಅಗತ್ಯವಿರುವವರು ನಿಯಂತ್ರಣ ಕೊಠಡಿ ಸಂಪರ್ಕಿಸುವಂತೆ ಅಧಿಕಾರಿಗಳು ಕೋರಿದ್ದಾರೆ.</p>.<p>ಲಾಕ್ಡೌನ್ ಸಡಿಲಿಕೆ ನಂತರ ನಗರದಲ್ಲಿ ವಾಹನಗಳ ಓಡಾಟ ಹೆಚ್ಚಾಗಿದೆ. ಜೊತೆಗೆ, ಕೊರೊನಾ ಪ್ರಕರಣಗಳ ಸಂಖ್ಯೆಯೇ ಏರುತ್ತಿದೆ. ಇಂಥ ಸಂದರ್ಭದಲ್ಲಿ ಸೋಂಕಿತರನ್ನು ಕರೆದೊಯ್ಯುವ ಆಂಬುಲೆನ್ಸ್ಗಳು ಕೆಲವೆಡೆ ದಟ್ಟಣೆಯಲ್ಲಿ ಸಿಲುಕುತ್ತಿವೆ. ಸೋಂಕಿತರು ಆಸ್ಪತ್ರೆ ತಲುಪುವುದು ತಡವಾಗುತ್ತಿದೆ.</p>.<p>ಇಂಥ ದಟ್ಟಣೆ ಸಂದರ್ಭದಲ್ಲಿ ಆಂಬುಲೆನ್ಸ್ಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡುವುದಾಗಿ ಪೊಲೀಸರು ಹೇಳಿದ್ದಾರೆ.</p>.<p>‘ಸರ್ಕಾರಿ ಅಥವಾ ಖಾಸಗಿ ಆಂಬುಲೆನ್ಸ್ಗಳ ತ್ವರಿತ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ನಾವು ಸಿದ್ಧರಾಗಿದ್ದೇವೆ. ಆಂಬುಲೆನ್ಸ್ಗಳ ಬಗ್ಗೆ ಮಾಹಿತಿ ನೀಡಿದರೆ ತುರ್ತಾಗಿ ಸ್ಪಂದಿಸಿ ರಸ್ತೆಯುದ್ದಕ್ಕೂ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಿದ್ದೇವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ನಿಯಂತ್ರಣ ಕೊಠಡಿ–100, 080–22943131, 22943030, 22943663 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>