<p><strong>ಬೆಂಗಳೂರು:</strong> ‘2024ರಲ್ಲಿ ಭಾರತದ ಪೊಲೀಸ್ ವ್ಯವಸ್ಥೆ ವಿಶ್ವದ ಅತಿ ದೊಡ್ಡ ಪೊಲೀಸ್ ವ್ಯವಸ್ಥೆಯಾಗಿ ಪರಿವರ್ತನೆ<br />ಗೊಳ್ಳಲಿದ್ದು, ಅದಕ್ಕೆ ತಕ್ಕಂತೆ ತಂತ್ರಜ್ಞಾನವೂ ಸೇರಿ ಎಲ್ಲ ರೀತಿಯ ವ್ಯವಸ್ಥೆಗಳನ್ನೂ ಮಾಡಿಕೊಳ್ಳಬೇಕು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.</p>.<p>ಸುರಕ್ಷಿತ ಬೆಂಗಳೂರಿಗಾಗಿ ಮತ್ತು ಮಹಿಳಾ ಸುರಕ್ಷತೆಗಾಗಿ ₹667ಕೋಟಿ ವೆಚ್ಚದ ‘ಸೇಫ್ ಸಿಟಿ’ ಮೊದಲ ಹಂತವನ್ನು ನಗರದ ಪುರಭವನದಲ್ಲಿ ಶುಕ್ರವಾರ ರಾತ್ರಿ ಅವರು ಉದ್ಘಾಟಿಸಿ ಮಾತನಾಡಿದರು.</p>.<p>‘ಪೊಲೀಸರು ಅತ್ಯಂತ ತ್ವರಿತಗತಿಯಲ್ಲಿ ಅಪರಾಧವನ್ನು ತಡೆಯಲು ಮತ್ತು ಅಪರಾಧ ನಡೆದ ಸ್ಥಳವನ್ನು ತಲುಪಲು ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು. ಮಾದಕವಸ್ತುಗಳುಯಾವುದೇ ಮೂಲಗಳಿಂದಲಾದರೂಬರಬಹುದು. ಇದರ ಮೇಲೆ ಕಣ್ಣಿಡಲು ತಂತ್ರಜ್ಞಾನ ಬಳಕೆ ಆಗಬೇಕು. ವಿಧಿವಿಜ್ಞಾನ ರಾಷ್ಟ್ರ ಮಟ್ಟದಲ್ಲಿ ಜಾಲವನ್ನು ರೂಪಿಸಬೇಕು. ಸೈಬರ್ ಜಾಗೃತಿಯನ್ನು ಯುವ ಜನತೆಯಲ್ಲಿ ಮೂಡಿಸಬೇಕಾಗಿದೆ’ ಎಂದರು.</p>.<p>‘ಮೋದಿ ಅವರು ಪ್ರಧಾನಿ ಆದ ಬಳಿಕ ದೇಶ ವ್ಯಾಪಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಆಧುನೀಕರಿಸುವ ಕೆಲಸ ನಡೆಯುತ್ತಿದೆ. ದೇಶದ ಶೇ 99ರಷ್ಟು ಠಾಣೆಗಳಲ್ಲಿ ಆನ್ಲೈನ್ ವ್ಯವಸ್ಥೆ ಜಾರಿಯಲ್ಲಿದೆ’ ಎಂದರು.</p>.<p>‘ನಗರದಲ್ಲಿ 7,000ಕ್ಕೂ ಹೆಚ್ಚು ಕಡೆಗಳಲ್ಲಿ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಮಾಂಡ್ ಸೆಂಟರ್ ಕೂಡ ಉತ್ತಮವಾಗಿ ಕೆಲಸ ಮಾಡಲಿದೆ. ಕಮಾಂಡ್ ಸೆಂಟರ್ ಜತೆ ಚೆನ್ನಮ್ಮಾ ಪಡೆ ಹೆಚ್ಚು ಸಂವೇದಾನಶೀಲವಾಗಿ<br />ಕಾರ್ಯನಿರ್ವಹಿಸಲಿದೆ. ಇದಕ್ಕಾಗಿ ಸಂಯುಕ್ತ ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲಾಗಿದೆ. ಇದರ ಜೊತೆ 112 ಹೊಯ್ಸಳ ವಾಹನಗಳನ್ನು ನಿಯೋಜಿಸಲಾಗಿದೆ’ ಎಂದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ನಾನು ಗೃಹ ಸಚಿವನಾಗಿದ್ದಾಗ ಮಾಮೂಲಿ ಕ್ಯಾಮೆರಾ ಅಳವಡಿಸುವ ಬದಲಿಗೆ ಆರ್ಟಿಫಿಷಿಯಲ್ ತಂತ್ರಜ್ಞಾನ ಹೊಂದಿರುವ ಕ್ಯಾಮೆರಾಗಳನ್ನು ಅಳವಡಿಸಲಾಯಿತು. ಈಗ ಬೆಂಗಳೂರಿನಲ್ಲಿ ಎಲ್ಲರ ಮೇಲೂ ವಿಶೇಷವಾಗಿ ಕ್ರಿಮಿನಲ್ಗಳ ಮೇಲೆ ಕ್ಯಾಮೆರಾಗಳು ಕಣ್ಣಿಟ್ಟಿವೆ. ಇದರಿಂದಾಗಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಮಹಿಳಾ ರಕ್ಷಣೆ ನಮ್ಮ ಮೊದಲ ಆದ್ಯತೆ. ನಮ್ಮ ಪೊಲೀಸರ ಮೇಲಿನ ನಂಬಿಕೆಯಿಂದ ಮಹಿಳೆಯರಿಗೆ ರಾತ್ರಿ ಪಾಳಿ ಕೆಲಸ ಮಾಡುವ ಅವಕಾಶವನ್ನು ಕಾನೂನಿನಲ್ಲಿ ನೀಡಲಾಗಿದೆ’ ಎಂದರು.</p>.<p>ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ‘ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ, ಸುರಕ್ಷತೆ ಉದ್ದೇಶದಿಂದ ಸೇಫ್ ಸಿಟಿ ಯೋಜನೆ ರೂಪಿಸಲಾಗಿದೆ. ಇದು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘2024ರಲ್ಲಿ ಭಾರತದ ಪೊಲೀಸ್ ವ್ಯವಸ್ಥೆ ವಿಶ್ವದ ಅತಿ ದೊಡ್ಡ ಪೊಲೀಸ್ ವ್ಯವಸ್ಥೆಯಾಗಿ ಪರಿವರ್ತನೆ<br />ಗೊಳ್ಳಲಿದ್ದು, ಅದಕ್ಕೆ ತಕ್ಕಂತೆ ತಂತ್ರಜ್ಞಾನವೂ ಸೇರಿ ಎಲ್ಲ ರೀತಿಯ ವ್ಯವಸ್ಥೆಗಳನ್ನೂ ಮಾಡಿಕೊಳ್ಳಬೇಕು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.</p>.<p>ಸುರಕ್ಷಿತ ಬೆಂಗಳೂರಿಗಾಗಿ ಮತ್ತು ಮಹಿಳಾ ಸುರಕ್ಷತೆಗಾಗಿ ₹667ಕೋಟಿ ವೆಚ್ಚದ ‘ಸೇಫ್ ಸಿಟಿ’ ಮೊದಲ ಹಂತವನ್ನು ನಗರದ ಪುರಭವನದಲ್ಲಿ ಶುಕ್ರವಾರ ರಾತ್ರಿ ಅವರು ಉದ್ಘಾಟಿಸಿ ಮಾತನಾಡಿದರು.</p>.<p>‘ಪೊಲೀಸರು ಅತ್ಯಂತ ತ್ವರಿತಗತಿಯಲ್ಲಿ ಅಪರಾಧವನ್ನು ತಡೆಯಲು ಮತ್ತು ಅಪರಾಧ ನಡೆದ ಸ್ಥಳವನ್ನು ತಲುಪಲು ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು. ಮಾದಕವಸ್ತುಗಳುಯಾವುದೇ ಮೂಲಗಳಿಂದಲಾದರೂಬರಬಹುದು. ಇದರ ಮೇಲೆ ಕಣ್ಣಿಡಲು ತಂತ್ರಜ್ಞಾನ ಬಳಕೆ ಆಗಬೇಕು. ವಿಧಿವಿಜ್ಞಾನ ರಾಷ್ಟ್ರ ಮಟ್ಟದಲ್ಲಿ ಜಾಲವನ್ನು ರೂಪಿಸಬೇಕು. ಸೈಬರ್ ಜಾಗೃತಿಯನ್ನು ಯುವ ಜನತೆಯಲ್ಲಿ ಮೂಡಿಸಬೇಕಾಗಿದೆ’ ಎಂದರು.</p>.<p>‘ಮೋದಿ ಅವರು ಪ್ರಧಾನಿ ಆದ ಬಳಿಕ ದೇಶ ವ್ಯಾಪಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಆಧುನೀಕರಿಸುವ ಕೆಲಸ ನಡೆಯುತ್ತಿದೆ. ದೇಶದ ಶೇ 99ರಷ್ಟು ಠಾಣೆಗಳಲ್ಲಿ ಆನ್ಲೈನ್ ವ್ಯವಸ್ಥೆ ಜಾರಿಯಲ್ಲಿದೆ’ ಎಂದರು.</p>.<p>‘ನಗರದಲ್ಲಿ 7,000ಕ್ಕೂ ಹೆಚ್ಚು ಕಡೆಗಳಲ್ಲಿ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಮಾಂಡ್ ಸೆಂಟರ್ ಕೂಡ ಉತ್ತಮವಾಗಿ ಕೆಲಸ ಮಾಡಲಿದೆ. ಕಮಾಂಡ್ ಸೆಂಟರ್ ಜತೆ ಚೆನ್ನಮ್ಮಾ ಪಡೆ ಹೆಚ್ಚು ಸಂವೇದಾನಶೀಲವಾಗಿ<br />ಕಾರ್ಯನಿರ್ವಹಿಸಲಿದೆ. ಇದಕ್ಕಾಗಿ ಸಂಯುಕ್ತ ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲಾಗಿದೆ. ಇದರ ಜೊತೆ 112 ಹೊಯ್ಸಳ ವಾಹನಗಳನ್ನು ನಿಯೋಜಿಸಲಾಗಿದೆ’ ಎಂದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ನಾನು ಗೃಹ ಸಚಿವನಾಗಿದ್ದಾಗ ಮಾಮೂಲಿ ಕ್ಯಾಮೆರಾ ಅಳವಡಿಸುವ ಬದಲಿಗೆ ಆರ್ಟಿಫಿಷಿಯಲ್ ತಂತ್ರಜ್ಞಾನ ಹೊಂದಿರುವ ಕ್ಯಾಮೆರಾಗಳನ್ನು ಅಳವಡಿಸಲಾಯಿತು. ಈಗ ಬೆಂಗಳೂರಿನಲ್ಲಿ ಎಲ್ಲರ ಮೇಲೂ ವಿಶೇಷವಾಗಿ ಕ್ರಿಮಿನಲ್ಗಳ ಮೇಲೆ ಕ್ಯಾಮೆರಾಗಳು ಕಣ್ಣಿಟ್ಟಿವೆ. ಇದರಿಂದಾಗಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಮಹಿಳಾ ರಕ್ಷಣೆ ನಮ್ಮ ಮೊದಲ ಆದ್ಯತೆ. ನಮ್ಮ ಪೊಲೀಸರ ಮೇಲಿನ ನಂಬಿಕೆಯಿಂದ ಮಹಿಳೆಯರಿಗೆ ರಾತ್ರಿ ಪಾಳಿ ಕೆಲಸ ಮಾಡುವ ಅವಕಾಶವನ್ನು ಕಾನೂನಿನಲ್ಲಿ ನೀಡಲಾಗಿದೆ’ ಎಂದರು.</p>.<p>ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ‘ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ, ಸುರಕ್ಷತೆ ಉದ್ದೇಶದಿಂದ ಸೇಫ್ ಸಿಟಿ ಯೋಜನೆ ರೂಪಿಸಲಾಗಿದೆ. ಇದು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>