‘ಆರೋಪಿಗೆ ಜಾಮೀನು ನೀಡಿದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸಿದಂತಾಗಲಿದೆ’ ಎಂದು ಸರ್ಕಾರಿ ವಕೀಲ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದರು. ‘ನೇಮಕಾತಿ ಪರೀಕ್ಷೆಯ ಒಎಂಆರ್ ಪ್ರತಿಗಳನ್ನು ಇರಿಸಿದ್ದ ಭದ್ರತಾಕೊಠಡಿಯ ಕೀ ಅನ್ನು ಪೌಲ್ ಕೆಳಗಿನ ಅಧಿಕಾರಿಗಳಿಗೆ ಯಾಕೆ ನೀಡಿದ್ದರು ಎಂಬುದಕ್ಕೆ ಸ್ಪಷ್ಟ ವಿವರಣೆ ನೀಡಿಲ್ಲ. ಪೌಲ್ ಹಿರಿಯ ಐಪಿಎಸ್ ಅಧಿಕಾರಿ. ಜಾಮೀನು ಲಭಿಸಿದರೆ ಪ್ರಭಾವ ಬಳಸಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ’ ಎಂದು ಹೇಳಿದರು.