‘ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಭದ್ರಾ ಜಲಾಶಯದಿಂದ ನೀರು ಪೂರೈಸಲು ನಾಲೆ ನಿರ್ಮಿಸಲಾಗುತ್ತಿದ್ದು, ಅದು ಅಮೃತ ಮಹಲ್ ಕಾವಲು ಮೂಲಕವೇ ಹಾದು ಹೋಗಲಿದೆ’ ಎಂದು ಆರೋಪಿಸಿಡಿ.ವಿ. ಗಿರೀಶ್ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.