<p><strong>ಯಲಹಂಕ:</strong> ಅಮೃತಹಳ್ಳಿಯ ಕೆರೆಯ ಪಕ್ಕದಲ್ಲಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಉದ್ಘಾಟಿಸಲಾಯಿತು.</p><p>ಸರ್ಕಾರದ ನಗರೋತ್ಥಾನ ಅನುದಾನದಡಿಯಲ್ಲಿ ₹1.8 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಬಯಲು ರಂಗಮಂದಿರದಲ್ಲಿ 500 ಮಂದಿ ಕುಳಿತು ವೀಕ್ಷಿಸಲು ಸ್ಥಳಾವಕಾಶವಿದೆ. ಹಿಂಭಾಗದ ಪರದೆಯ ಮೇಲೆ ಹಾಗೂ ಸುತ್ತಲಿನ ಗೋಡೆಯ ಮೇಲೆ ಸುಂದರವಾದ ಚಿತ್ರಗಳನ್ನು ಬಿಡಿಸಲಾಗಿದೆ.</p><p>‘ಕೆರೆಯಲ್ಲಿ ಈಗಾಗಲೆ ನಡಿಗೆ ಪಥ, ಯೋಗ ಪೆವಿಲಿಯನ್, ತೆರೆದ ಜಿಮ್, ಮಕ್ಕಳು ಆಟವಾಡಲು ಮತ್ತು ಹಿರಿಯ ನಾಗರಿಕರು ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಕೆರೆಯ ಸುತ್ತಮುತ್ತ ಹಲವಾರು ಬಡಾವಣೆಗಳು ನಿರ್ಮಾಣವಾಗಿದ್ದು, ಇಲ್ಲಿನ ನಿವಾಸಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ರಂಗಮಂದಿರದ ಅವಶ್ಯಕತೆಯಿತ್ತು. ಈ ದಿಸೆಯಲ್ಲಿ ಇಲ್ಲಿನ ಜನರು ಒಂದೆಡೆ ಸೇರಿ ಸ್ಥಳೀಯ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ರಂಗಮಂದಿರ ನಿರ್ಮಿಸಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p><p>ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಸ್ವಸ್ತಿಕ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನ ಹಾಗೂ ಸ್ಥಳೀಯ ಕಲಾವಿದರಿಂದ ಭರತನಾಟ್ಯ, ಗಾಯನ, ಕೊಳಲುವಾದನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.</p><p>ಬಿಬಿಎಂಪಿ ಮಾಜಿ ಸದಸ್ಯ ಪಿ.ವಿ.ಮಂಜುನಾಥ ಬಾಬು, ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಕೃಷ್ಣಬೈರೇಗೌಡ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ವಿ.ಹರಿ, ಕೆ.ಗೌರೀಶ್, ಶಾಂತಮ್ಮ, ದಿವ್ಯ ರಾಜಣ್ಣ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಅಮೃತಹಳ್ಳಿಯ ಕೆರೆಯ ಪಕ್ಕದಲ್ಲಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಉದ್ಘಾಟಿಸಲಾಯಿತು.</p><p>ಸರ್ಕಾರದ ನಗರೋತ್ಥಾನ ಅನುದಾನದಡಿಯಲ್ಲಿ ₹1.8 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಬಯಲು ರಂಗಮಂದಿರದಲ್ಲಿ 500 ಮಂದಿ ಕುಳಿತು ವೀಕ್ಷಿಸಲು ಸ್ಥಳಾವಕಾಶವಿದೆ. ಹಿಂಭಾಗದ ಪರದೆಯ ಮೇಲೆ ಹಾಗೂ ಸುತ್ತಲಿನ ಗೋಡೆಯ ಮೇಲೆ ಸುಂದರವಾದ ಚಿತ್ರಗಳನ್ನು ಬಿಡಿಸಲಾಗಿದೆ.</p><p>‘ಕೆರೆಯಲ್ಲಿ ಈಗಾಗಲೆ ನಡಿಗೆ ಪಥ, ಯೋಗ ಪೆವಿಲಿಯನ್, ತೆರೆದ ಜಿಮ್, ಮಕ್ಕಳು ಆಟವಾಡಲು ಮತ್ತು ಹಿರಿಯ ನಾಗರಿಕರು ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಕೆರೆಯ ಸುತ್ತಮುತ್ತ ಹಲವಾರು ಬಡಾವಣೆಗಳು ನಿರ್ಮಾಣವಾಗಿದ್ದು, ಇಲ್ಲಿನ ನಿವಾಸಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ರಂಗಮಂದಿರದ ಅವಶ್ಯಕತೆಯಿತ್ತು. ಈ ದಿಸೆಯಲ್ಲಿ ಇಲ್ಲಿನ ಜನರು ಒಂದೆಡೆ ಸೇರಿ ಸ್ಥಳೀಯ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ರಂಗಮಂದಿರ ನಿರ್ಮಿಸಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p><p>ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಸ್ವಸ್ತಿಕ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನ ಹಾಗೂ ಸ್ಥಳೀಯ ಕಲಾವಿದರಿಂದ ಭರತನಾಟ್ಯ, ಗಾಯನ, ಕೊಳಲುವಾದನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.</p><p>ಬಿಬಿಎಂಪಿ ಮಾಜಿ ಸದಸ್ಯ ಪಿ.ವಿ.ಮಂಜುನಾಥ ಬಾಬು, ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಕೃಷ್ಣಬೈರೇಗೌಡ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ವಿ.ಹರಿ, ಕೆ.ಗೌರೀಶ್, ಶಾಂತಮ್ಮ, ದಿವ್ಯ ರಾಜಣ್ಣ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>