<p><strong>ಯಲಹಂಕ:</strong> ಅಮೃತಹಳ್ಳಿಯ ಕೆರೆಯ ಪಕ್ಕದಲ್ಲಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಉದ್ಘಾಟಿಸಲಾಯಿತು.</p><p>ಸರ್ಕಾರದ ನಗರೋತ್ಥಾನ ಅನುದಾನದಡಿಯಲ್ಲಿ ₹1.8 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಬಯಲು ರಂಗಮಂದಿರದಲ್ಲಿ 500 ಮಂದಿ ಕುಳಿತು ವೀಕ್ಷಿಸಲು ಸ್ಥಳಾವಕಾಶವಿದೆ. ಹಿಂಭಾಗದ ಪರದೆಯ ಮೇಲೆ ಹಾಗೂ ಸುತ್ತಲಿನ ಗೋಡೆಯ ಮೇಲೆ ಸುಂದರವಾದ ಚಿತ್ರಗಳನ್ನು ಬಿಡಿಸಲಾಗಿದೆ.</p><p>‘ಕೆರೆಯಲ್ಲಿ ಈಗಾಗಲೆ ನಡಿಗೆ ಪಥ, ಯೋಗ ಪೆವಿಲಿಯನ್, ತೆರೆದ ಜಿಮ್, ಮಕ್ಕಳು ಆಟವಾಡಲು ಮತ್ತು ಹಿರಿಯ ನಾಗರಿಕರು ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಕೆರೆಯ ಸುತ್ತಮುತ್ತ ಹಲವಾರು ಬಡಾವಣೆಗಳು ನಿರ್ಮಾಣವಾಗಿದ್ದು, ಇಲ್ಲಿನ ನಿವಾಸಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ರಂಗಮಂದಿರದ ಅವಶ್ಯಕತೆಯಿತ್ತು. ಈ ದಿಸೆಯಲ್ಲಿ ಇಲ್ಲಿನ ಜನರು ಒಂದೆಡೆ ಸೇರಿ ಸ್ಥಳೀಯ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ರಂಗಮಂದಿರ ನಿರ್ಮಿಸಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p><p>ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಸ್ವಸ್ತಿಕ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನ ಹಾಗೂ ಸ್ಥಳೀಯ ಕಲಾವಿದರಿಂದ ಭರತನಾಟ್ಯ, ಗಾಯನ, ಕೊಳಲುವಾದನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.</p><p>ಬಿಬಿಎಂಪಿ ಮಾಜಿ ಸದಸ್ಯ ಪಿ.ವಿ.ಮಂಜುನಾಥ ಬಾಬು, ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಕೃಷ್ಣಬೈರೇಗೌಡ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ವಿ.ಹರಿ, ಕೆ.ಗೌರೀಶ್, ಶಾಂತಮ್ಮ, ದಿವ್ಯ ರಾಜಣ್ಣ ಉಪಸ್ಥಿತರಿದ್ದರು. </p>
<p><strong>ಯಲಹಂಕ:</strong> ಅಮೃತಹಳ್ಳಿಯ ಕೆರೆಯ ಪಕ್ಕದಲ್ಲಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಉದ್ಘಾಟಿಸಲಾಯಿತು.</p><p>ಸರ್ಕಾರದ ನಗರೋತ್ಥಾನ ಅನುದಾನದಡಿಯಲ್ಲಿ ₹1.8 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಬಯಲು ರಂಗಮಂದಿರದಲ್ಲಿ 500 ಮಂದಿ ಕುಳಿತು ವೀಕ್ಷಿಸಲು ಸ್ಥಳಾವಕಾಶವಿದೆ. ಹಿಂಭಾಗದ ಪರದೆಯ ಮೇಲೆ ಹಾಗೂ ಸುತ್ತಲಿನ ಗೋಡೆಯ ಮೇಲೆ ಸುಂದರವಾದ ಚಿತ್ರಗಳನ್ನು ಬಿಡಿಸಲಾಗಿದೆ.</p><p>‘ಕೆರೆಯಲ್ಲಿ ಈಗಾಗಲೆ ನಡಿಗೆ ಪಥ, ಯೋಗ ಪೆವಿಲಿಯನ್, ತೆರೆದ ಜಿಮ್, ಮಕ್ಕಳು ಆಟವಾಡಲು ಮತ್ತು ಹಿರಿಯ ನಾಗರಿಕರು ಕುಳಿತುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ಕೆರೆಯ ಸುತ್ತಮುತ್ತ ಹಲವಾರು ಬಡಾವಣೆಗಳು ನಿರ್ಮಾಣವಾಗಿದ್ದು, ಇಲ್ಲಿನ ನಿವಾಸಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ರಂಗಮಂದಿರದ ಅವಶ್ಯಕತೆಯಿತ್ತು. ಈ ದಿಸೆಯಲ್ಲಿ ಇಲ್ಲಿನ ಜನರು ಒಂದೆಡೆ ಸೇರಿ ಸ್ಥಳೀಯ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ರಂಗಮಂದಿರ ನಿರ್ಮಿಸಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.</p><p>ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಸ್ವಸ್ತಿಕ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ವಿಶೇಷ ನೃತ್ಯ ಪ್ರದರ್ಶನ ಹಾಗೂ ಸ್ಥಳೀಯ ಕಲಾವಿದರಿಂದ ಭರತನಾಟ್ಯ, ಗಾಯನ, ಕೊಳಲುವಾದನ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.</p><p>ಬಿಬಿಎಂಪಿ ಮಾಜಿ ಸದಸ್ಯ ಪಿ.ವಿ.ಮಂಜುನಾಥ ಬಾಬು, ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಕೃಷ್ಣಬೈರೇಗೌಡ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ವಿ.ಹರಿ, ಕೆ.ಗೌರೀಶ್, ಶಾಂತಮ್ಮ, ದಿವ್ಯ ರಾಜಣ್ಣ ಉಪಸ್ಥಿತರಿದ್ದರು. </p>