ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಚ್. ಪವನ್ ಚಂದ್ರ ಶೆಟ್ಟಿ, ‘ದೇಶದ ವಿರುದ್ಧ ಘೋಷಣೆ ಕೂಗಿದ ಪ್ರಕರಣವಾಗಿದ್ದು ಅತ್ಯಂತ ಗಂಭೀರ ಸ್ವರೂಪದ್ದಾಗಿದೆ. ಪ್ರಕರಣದ ತನಿಖೆಯನ್ನು ಉಪ್ಪಾರಪೇಟೆ ಠಾಣೆ ತನಿಖಾಧಿಕಾರಿ ಸೂಕ್ತವಾಗಿ ನಡೆಸಿಲ್ಲ. ನಿಗದಿತ 90 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಇದರಿಂದ ಆರೋಪಿಗೆ ಜಾಮೀನು ಸಿಕ್ಕಿದೆ’ ಎಂದು ಆಕ್ಷೇಪಿಸಿದರು.