<p><strong>ಬೆಂಗಳೂರು</strong>: ವಿವಾಹಿತ ಮಹಿಳೆಗೆ ಪೀಡಿಸುತ್ತಿದ್ದ ಆಟೊ ಚಾಲಕನಿಗೆ ಮಹಿಳೆಯ ಪತಿ ಹಾಗೂ ಸಹೋದರ ಚಾಕುವಿನಿಂದ ಇರಿದಿದ್ದು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.</p>.<p>ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿ ಪಂತರಪಾಳ್ಯದಲ್ಲಿ ಘಟನೆ ನಡೆದಿದೆ.</p>.<p>ಹೊಸಗುಡ್ಡದಹಳ್ಳಿ ನಿವಾಸಿ ಕಾರ್ತಿಕ್(26) ಇರಿತಕ್ಕೆ ಒಳಗಾದವರು.</p>.<p>ಸದ್ಯ ಕಾರ್ತಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ಧಾರೆ. ಘಟನೆ ಸಂಬಂಧ ಮಹಿಳೆಯ ಪತಿ ಸತೀಶ್, ಸಹೋದರ ವಿನೋದ್ ಮತ್ತು ಸೂರ್ಯ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಆಟೊ ಚಾಲಕನಾಗಿರುವ ಕಾರ್ತಿಕ್, ಪಂತರಪಾಳ್ಯದ ವಿವಾಹಿತ ಮಹಿಳೆಯೊಂದಿಗೆ ಸಲುಗೆ ಬೆಳೆಸಲು ಮುಂದಾಗಿದ್ದ. ಅವರು ಬುದ್ಧಿಮಾತು ಹೇಳಿದ್ದರೂ ತೊಂದರೆ ಕೊಡುತ್ತಿದ್ದ. ಆತನ ವರ್ತನೆಯಿಂದ ಬೇಸತ್ತಿದ್ದ ಆಕೆ ಪತಿ ಹಾಗೂ ಸಹೋದರನಿಗೆ ಮಾಹಿತಿ ನೀಡಿದ್ದರು. ಈ ವಿಚಾರ ತಿಳಿದ ಮಹಿಳೆಯ ಪತಿ ಮತ್ತು ಸಹೋದರ, ಕಾರ್ತಿಕ್ಗೆ ಬುದ್ಧಿ ಹೇಳಿದ್ದರು. ಆದರೂ ಆತ ವರ್ತನೆ ಮುಂದುರಿಸಿದ್ದ. ಕೋಪಗೊಂಡ ಆರೋಪಿಗಳು ಸೋಮವಾರ ರಾತ್ರಿ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿವಾಹಿತ ಮಹಿಳೆಗೆ ಪೀಡಿಸುತ್ತಿದ್ದ ಆಟೊ ಚಾಲಕನಿಗೆ ಮಹಿಳೆಯ ಪತಿ ಹಾಗೂ ಸಹೋದರ ಚಾಕುವಿನಿಂದ ಇರಿದಿದ್ದು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.</p>.<p>ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿ ಪಂತರಪಾಳ್ಯದಲ್ಲಿ ಘಟನೆ ನಡೆದಿದೆ.</p>.<p>ಹೊಸಗುಡ್ಡದಹಳ್ಳಿ ನಿವಾಸಿ ಕಾರ್ತಿಕ್(26) ಇರಿತಕ್ಕೆ ಒಳಗಾದವರು.</p>.<p>ಸದ್ಯ ಕಾರ್ತಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅಪಾಯದಿಂದ ಪಾರಾಗಿದ್ಧಾರೆ. ಘಟನೆ ಸಂಬಂಧ ಮಹಿಳೆಯ ಪತಿ ಸತೀಶ್, ಸಹೋದರ ವಿನೋದ್ ಮತ್ತು ಸೂರ್ಯ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಆಟೊ ಚಾಲಕನಾಗಿರುವ ಕಾರ್ತಿಕ್, ಪಂತರಪಾಳ್ಯದ ವಿವಾಹಿತ ಮಹಿಳೆಯೊಂದಿಗೆ ಸಲುಗೆ ಬೆಳೆಸಲು ಮುಂದಾಗಿದ್ದ. ಅವರು ಬುದ್ಧಿಮಾತು ಹೇಳಿದ್ದರೂ ತೊಂದರೆ ಕೊಡುತ್ತಿದ್ದ. ಆತನ ವರ್ತನೆಯಿಂದ ಬೇಸತ್ತಿದ್ದ ಆಕೆ ಪತಿ ಹಾಗೂ ಸಹೋದರನಿಗೆ ಮಾಹಿತಿ ನೀಡಿದ್ದರು. ಈ ವಿಚಾರ ತಿಳಿದ ಮಹಿಳೆಯ ಪತಿ ಮತ್ತು ಸಹೋದರ, ಕಾರ್ತಿಕ್ಗೆ ಬುದ್ಧಿ ಹೇಳಿದ್ದರು. ಆದರೂ ಆತ ವರ್ತನೆ ಮುಂದುರಿಸಿದ್ದ. ಕೋಪಗೊಂಡ ಆರೋಪಿಗಳು ಸೋಮವಾರ ರಾತ್ರಿ ಚಾಕುವಿನಿಂದ ಇರಿದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>