‘ರಾಜ್ಯದಲ್ಲಿ ಕೊರೊನಾವನ್ನು ತಹಬದಿಗೆ ತರುವಲ್ಲಿ, ಜನರ ಪ್ರಾಣ ಉಳಿಸುವಲ್ಲಿ ಸೋತಿರುವ ಸರ್ಕಾರ, ಎಲ್ಲೆಡೆ ಲೂಟಿಗೆ ಇಳಿದಿದೆ. ಕಾರ್ಮಿಕ ಇಲಾಖೆ ಮೂಲಕ ಕಾರ್ಮಿಕರಿಗೆ ಕಳಪೆ ದಿನಸಿ ಕಿಟ್ ನೀಡಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಬಿಜೆಪಿ ಶಾಸಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲೇ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ಖರ್ಚು ಮಾಡಿ, ದಿನಸಿ ಕಿಟ್ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.