<p><strong>ಬೆಂಗಳೂರು:</strong>ಹೆರೋಹಳ್ಳಿ ವಾರ್ಡ್ನ ಬಿಜೆಪಿ ಮುಖಂಡ ಬಿ.ಪಿ.ಅನಂತರಾಜು (46) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಗೆಳತಿ ರೇಖಾ (38) ಎಂಬುವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೆ.ಆರ್.ಪುರ ನಿವಾಸಿಯಾದ ರೇಖಾ ತನ್ನ ಪತಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿದ್ದಳು. ಹೀಗಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿ ಅನಂತರಾಜು ಪತ್ನಿ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಅನಂತರಾಜು ಆತ್ಮಹತ್ಯೆಯ ವಿಷಯ ತಿಳಿದೊಡನೆ ರೇಖಾ ನಾಪತ್ತೆಯಾಗಿದ್ದರು. ಮಂಗಳವಾರ ಮಧ್ಯಾಹ್ನ ಆಕೆಯನ್ನು ಬಂಧಿಸಲಾಗಿದೆ’ ಎಂದುಬ್ಯಾಡರಹಳ್ಳಿ ಠಾಣೆ ಮೂಲಗಳು ತಿಳಿಸಿವೆ.</p>.<p>‘ಅನಂತರಾಜು ಹಾಗೂ ರೇಖಾ ಆರು ವರ್ಷಗಳಿಂದ ಪರಿಚಿತರಾಗಿದ್ದರು. ಅನಂತರಾಜು ಮನೆಯಲ್ಲಿ ಸಿಕ್ಕಿದ್ದ ಮರಣ ಪತ್ರದಲ್ಲಿ ಆಕೆಯ ಹೆಸರೂ ಇತ್ತೂ. ಈ ಪ್ರಕರಣದಲ್ಲಿ ರೇಖಾ ಪತಿ ವಿನೋದ್ ಹಾಗೂ ಆಕೆಯ ಸ್ನೇಹಿತೆಯ ಪಾತ್ರವಿಲ್ಲ’ ಎಂದೂ ಮೂಲಗಳು ಹೇಳಿವೆ.</p>.<p>‘ರೇಖಾ ಹಾಗೂ ಅನಂತರಾಜು ದೈಹಿಕ ಸಂಪರ್ಕ ಹೊಂದಿದ್ದರು. ಇದನ್ನು ನೋಡಿದ್ದ ಪತ್ನಿ ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದರು. ಆ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದೂ ಮಾಹಿತಿ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಹೆರೋಹಳ್ಳಿ ವಾರ್ಡ್ನ ಬಿಜೆಪಿ ಮುಖಂಡ ಬಿ.ಪಿ.ಅನಂತರಾಜು (46) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಗೆಳತಿ ರೇಖಾ (38) ಎಂಬುವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಕೆ.ಆರ್.ಪುರ ನಿವಾಸಿಯಾದ ರೇಖಾ ತನ್ನ ಪತಿಯನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿದ್ದಳು. ಹೀಗಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿ ಅನಂತರಾಜು ಪತ್ನಿ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಅನಂತರಾಜು ಆತ್ಮಹತ್ಯೆಯ ವಿಷಯ ತಿಳಿದೊಡನೆ ರೇಖಾ ನಾಪತ್ತೆಯಾಗಿದ್ದರು. ಮಂಗಳವಾರ ಮಧ್ಯಾಹ್ನ ಆಕೆಯನ್ನು ಬಂಧಿಸಲಾಗಿದೆ’ ಎಂದುಬ್ಯಾಡರಹಳ್ಳಿ ಠಾಣೆ ಮೂಲಗಳು ತಿಳಿಸಿವೆ.</p>.<p>‘ಅನಂತರಾಜು ಹಾಗೂ ರೇಖಾ ಆರು ವರ್ಷಗಳಿಂದ ಪರಿಚಿತರಾಗಿದ್ದರು. ಅನಂತರಾಜು ಮನೆಯಲ್ಲಿ ಸಿಕ್ಕಿದ್ದ ಮರಣ ಪತ್ರದಲ್ಲಿ ಆಕೆಯ ಹೆಸರೂ ಇತ್ತೂ. ಈ ಪ್ರಕರಣದಲ್ಲಿ ರೇಖಾ ಪತಿ ವಿನೋದ್ ಹಾಗೂ ಆಕೆಯ ಸ್ನೇಹಿತೆಯ ಪಾತ್ರವಿಲ್ಲ’ ಎಂದೂ ಮೂಲಗಳು ಹೇಳಿವೆ.</p>.<p>‘ರೇಖಾ ಹಾಗೂ ಅನಂತರಾಜು ದೈಹಿಕ ಸಂಪರ್ಕ ಹೊಂದಿದ್ದರು. ಇದನ್ನು ನೋಡಿದ್ದ ಪತ್ನಿ ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದರು. ಆ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದೂ ಮಾಹಿತಿ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>