ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಅನಂತ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಪ್ರೊ.ಪಿ.ವಿ.ಕೃಷ್ಣಭಟ್ ನೇತೃತ್ವದಲ್ಲಿ ಸೆಪ್ಟೆಂಬರ್ 22ರಂದು ಮಧ್ಯಾಹ್ನ 3 ಗಂಟೆಗೆ ‘ಅನಂತಕುಮಾರ್ ಪ್ರತಿಷ್ಠಾನ’ದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜಗತ್ಪ್ರಕಾಶ್ನಡ್ಡಾ, ಅನಂತಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್ ಭಾಗಿಯಾಗಲಿದ್ದಾರೆ. ಇದೇ ವೇಳೆ ಬಡ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲಾಗುವುದು.
ಸ್ಥಳ–ಮಂಗಳ ಸಭಾಮಂಟಪ, ಎನ್ಎಂಕೆಆರ್ವಿ ಕಾಲೇಜು ಆವರಣ, ಜಯನಗರ.