‘ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಆರಂಭದಲ್ಲಿ ಆತನ ಸುಳಿವು ಸಿಕ್ಕಿರಲಿಲ್ಲ. ಇದೇ ಮಾದರಿಯಲ್ಲಿ ಜ್ಞಾನಭಾರತಿ ಹಾಗೂ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಗಳಲ್ಲೂ ಕೃತ್ಯ ನಡೆದಿದ್ದು ಗಮನಕ್ಕೆ ಬಂದಿತ್ತು. ಹೀಗಾಗಿ, ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು’ ಎಂದೂ ಮೂಲಗಳು ತಿಳಿಸಿವೆ.