<p><strong>ಆನೇಕಲ್</strong>: ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದ ರಸ್ತೆಯಲ್ಲಿ ಅಡ್ಡ ಬಂದ ಕಾರನ್ನು ‘ಹಿಂದಕ್ಕೆ ತೆಗೆದುಕೋ’ ಎಂದು ಹೇಳಿದಕ್ಕೆ ಕೋಪಗೊಂಡ ಯುವಕರಿಬ್ಬರು ತಂದೆ, ಮಗನಿಗೆ ಚಾಕುವಿನಿಂದ ಇರಿದ್ದಿದು, ಆರೋಪಿಯನ್ನು ಬಂಧಿಸಲಾಗಿದೆ.</p>.<p>ನವೀನ್ (42), ಇವರ ಪುತ್ರ ತಾರಕೇಶ್ ಗೌಡ(16) ಚಾಕು ಇರಿತಕ್ಕೆ ಒಳಾಗದವರು. ಆನೇಕಲ್ನ ಆದಿ ಬಂಧಿತ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ನವೀನ್ ಮತ್ತು ತಾರಕೇಶ್ ಗೌಡ ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾರೊಂದು ಎದುರುಗಡೆಯಿಂದ ಬಂದಿದೆ. ಈ ವೇಳೆ ‘ಕಾರನ್ನು ಹಿಂದಕ್ಕೆ ತೆಗೆದುಕೊಳ್ಳಿ ನಾವು ಮುಂದೆ ಹೋಗುತ್ತೇವೆ’ ಎಂದಿದ್ದಕ್ಕೆ ನಶೆಯಲ್ಲಿದ್ದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ನವೀನ್ ಹೊಟ್ಟೆ ಭಾಗಕ್ಕೆ ಇರಿದಿದ್ದಾರೆ. ಈ ಸಮಯದಲ್ಲಿ ತಾರಕೇಶ್ಗೂ ಚಾಕುವಿನಿಂದ ಇರಿಯಲಾಗಿದೆ.</p>.<p>ಸ್ಥಳೀಯರು ಚಾಕು ಇರಿದ ಯುವಕನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಆರೋಪಿ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ನಶೆ ಗುಂಗಿನಲ್ಲಿ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-18-856534487</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದ ರಸ್ತೆಯಲ್ಲಿ ಅಡ್ಡ ಬಂದ ಕಾರನ್ನು ‘ಹಿಂದಕ್ಕೆ ತೆಗೆದುಕೋ’ ಎಂದು ಹೇಳಿದಕ್ಕೆ ಕೋಪಗೊಂಡ ಯುವಕರಿಬ್ಬರು ತಂದೆ, ಮಗನಿಗೆ ಚಾಕುವಿನಿಂದ ಇರಿದ್ದಿದು, ಆರೋಪಿಯನ್ನು ಬಂಧಿಸಲಾಗಿದೆ.</p>.<p>ನವೀನ್ (42), ಇವರ ಪುತ್ರ ತಾರಕೇಶ್ ಗೌಡ(16) ಚಾಕು ಇರಿತಕ್ಕೆ ಒಳಾಗದವರು. ಆನೇಕಲ್ನ ಆದಿ ಬಂಧಿತ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ನವೀನ್ ಮತ್ತು ತಾರಕೇಶ್ ಗೌಡ ಪಟ್ಟಣದ ತಿಮ್ಮರಾಯಸ್ವಾಮಿ ದೇವಾಲಯದ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾರೊಂದು ಎದುರುಗಡೆಯಿಂದ ಬಂದಿದೆ. ಈ ವೇಳೆ ‘ಕಾರನ್ನು ಹಿಂದಕ್ಕೆ ತೆಗೆದುಕೊಳ್ಳಿ ನಾವು ಮುಂದೆ ಹೋಗುತ್ತೇವೆ’ ಎಂದಿದ್ದಕ್ಕೆ ನಶೆಯಲ್ಲಿದ್ದ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ನವೀನ್ ಹೊಟ್ಟೆ ಭಾಗಕ್ಕೆ ಇರಿದಿದ್ದಾರೆ. ಈ ಸಮಯದಲ್ಲಿ ತಾರಕೇಶ್ಗೂ ಚಾಕುವಿನಿಂದ ಇರಿಯಲಾಗಿದೆ.</p>.<p>ಸ್ಥಳೀಯರು ಚಾಕು ಇರಿದ ಯುವಕನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಆರೋಪಿ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ನಶೆ ಗುಂಗಿನಲ್ಲಿ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-18-856534487</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>