‘ರಾಜ್ಯದ ಅಂಗನವಾಡಿಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಹಲವು ಯೋಜನೆಗಳ ಜಾರಿ ಕೆಲಸವನ್ನು ಅವರಿಂದ ಮಾಡಿಸಿಕೊಳ್ಳಲಾಗುತ್ತಿದೆ. ಆದರೆ, ಕೆಲಸಕ್ಕೆ ತಕ್ಕ ವೇತನವನ್ನು ಮಾತ್ರ ನೀಡುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಹೀಗಾಗಿ, ಈ ಬಾರಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದೇವೆ’ ಎಂದು ಪ್ರತಿಭಟನಕಾರರು ಹೇಳಿದರು.