<p><strong>ಬೆಂಗಳೂರು</strong>: ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆಬ್ರುವರಿ 26ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.</p>.<p>‘ಗೌರವಧನ ಮಾಸಿಕ ₹15,000ಕ್ಕೆ ಹೆಚ್ಚಳ ಹಾಗೂ ನಿವೃತ್ತಿ ಪರಿಹಾರ ₹2 ಲಕ್ಷ ನೀಡುವುದಾಗಿ 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡುವಂತೆ ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಕಾರ್ಯದರ್ಶಿ ಎಂ. ಉಮಾದೇವಿ ತಿಳಿಸಿದ್ದಾರೆ.</p>.<p>ನಿವೃತ್ತಿಯಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಗ್ರ್ಯಾಚುಟಿ ನೀಡುವ ಜತೆಗೆ ನಿರ್ಬಂಧಗಳನ್ನು ತೆಗೆದು ಹಾಕಬೇಕು. ಅಂಗನವಾಡಿ ನೌಕರರನ್ನು ಗುಜರಾತ್ ಹೈಕೋರ್ಟ್ ಆದೇಶದಂತೆ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ತ್ತಾಯಿಸಿದ್ದಾರೆ.</p>.<p>ಸಮಸ್ಯೆಯನ್ನು ಬಗೆಹರಿಸಿ ಸರಳವಾಗಿ ನಿವೃತ್ತಿ ಪರಿಹಾರದ ಹಣ ಸಿಗುವಂತೆ ಸೂಕ್ತ ಕ್ರಮವಹಿಸಬೇಕು. ನೌಕರರನ್ನು ಸರ್ಕಾರದ ಪಿಂಚಣಿ ಯೋಜನೆಗೆ ಒಳಪಡಿಸಬೇಕು. ಅಲ್ಲಿಯವರೆಗೂ ನಿವೃತ್ತಿ ಪರಿಹಾರದ ಇಡುಗಂಟು ₹5 ಲಕ್ಷ ನಿಗದಿ ಮಾಡಬೇಕು. ಸೇವಾ ಹಿರಿತನ ಆಧರಿಸಿ ಶೇ 50ರಷ್ಟು ಹುದ್ದೆಗಳನ್ನು ಬಡ್ತಿ ಮೂಲಕ ಹಾಗೂ ಮೆರಿಟ್ ಆಧರಿಸಿ ಶೇ 50ರಷ್ಟು ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಐಸಿಡಿಎಸ್ ಹೊರತುಪಡಿಸಿ ಇತರ ಇಲಾಖೆಗಳ ಹೆಚ್ಚುವರಿ ಕೆಲಸ ನೀಡಬಾರದು. ಪ್ರತಿ ತಿಂಗಳು 5ರೊಳಗೆ ಮಾಸಿಕ ವೇತನ ಪಾವತಿ ಮಾಡಬೇಕು. ಖಾಲಿ ಇರುವ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕು. ಮಾತೃ ವಂದನಾ, ಭಾಗ್ಯಲಕ್ಷ್ಮಿ ಯೋಜನೆಯ ಕೆಲಸಗಳಿಗೆ ಹೆಚ್ಚುವರಿ ಗೌರವಧನ ನೀಡಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆಬ್ರುವರಿ 26ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.</p>.<p>‘ಗೌರವಧನ ಮಾಸಿಕ ₹15,000ಕ್ಕೆ ಹೆಚ್ಚಳ ಹಾಗೂ ನಿವೃತ್ತಿ ಪರಿಹಾರ ₹2 ಲಕ್ಷ ನೀಡುವುದಾಗಿ 2026-27ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡುವಂತೆ ಒತ್ತಾಯಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಕಾರ್ಯದರ್ಶಿ ಎಂ. ಉಮಾದೇವಿ ತಿಳಿಸಿದ್ದಾರೆ.</p>.<p>ನಿವೃತ್ತಿಯಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಗ್ರ್ಯಾಚುಟಿ ನೀಡುವ ಜತೆಗೆ ನಿರ್ಬಂಧಗಳನ್ನು ತೆಗೆದು ಹಾಕಬೇಕು. ಅಂಗನವಾಡಿ ನೌಕರರನ್ನು ಗುಜರಾತ್ ಹೈಕೋರ್ಟ್ ಆದೇಶದಂತೆ ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ತ್ತಾಯಿಸಿದ್ದಾರೆ.</p>.<p>ಸಮಸ್ಯೆಯನ್ನು ಬಗೆಹರಿಸಿ ಸರಳವಾಗಿ ನಿವೃತ್ತಿ ಪರಿಹಾರದ ಹಣ ಸಿಗುವಂತೆ ಸೂಕ್ತ ಕ್ರಮವಹಿಸಬೇಕು. ನೌಕರರನ್ನು ಸರ್ಕಾರದ ಪಿಂಚಣಿ ಯೋಜನೆಗೆ ಒಳಪಡಿಸಬೇಕು. ಅಲ್ಲಿಯವರೆಗೂ ನಿವೃತ್ತಿ ಪರಿಹಾರದ ಇಡುಗಂಟು ₹5 ಲಕ್ಷ ನಿಗದಿ ಮಾಡಬೇಕು. ಸೇವಾ ಹಿರಿತನ ಆಧರಿಸಿ ಶೇ 50ರಷ್ಟು ಹುದ್ದೆಗಳನ್ನು ಬಡ್ತಿ ಮೂಲಕ ಹಾಗೂ ಮೆರಿಟ್ ಆಧರಿಸಿ ಶೇ 50ರಷ್ಟು ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಐಸಿಡಿಎಸ್ ಹೊರತುಪಡಿಸಿ ಇತರ ಇಲಾಖೆಗಳ ಹೆಚ್ಚುವರಿ ಕೆಲಸ ನೀಡಬಾರದು. ಪ್ರತಿ ತಿಂಗಳು 5ರೊಳಗೆ ಮಾಸಿಕ ವೇತನ ಪಾವತಿ ಮಾಡಬೇಕು. ಖಾಲಿ ಇರುವ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕು. ಮಾತೃ ವಂದನಾ, ಭಾಗ್ಯಲಕ್ಷ್ಮಿ ಯೋಜನೆಯ ಕೆಲಸಗಳಿಗೆ ಹೆಚ್ಚುವರಿ ಗೌರವಧನ ನೀಡಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>