<p><strong>ಬೆಂಗಳೂರು:</strong> ಕನಿಷ್ಠ ವೇತನ ಜಾರಿಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.</p>.<p>2025ರ ನ.14ರಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದು ಮಾಡಬೇಕು. ಬಜೆಟ್ನಲ್ಲಿ ಘೋಷಿಸಿರುವಂತೆ 800 ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ–ಯುಕೆಜಿ ಆರಂಭಿಸುವಾಗ ಆ ಗ್ರಾಮಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಅಂಗನವಾಡಿ ಕಾರ್ಯಕರ್ತೆಯರನ್ನು ‘ಕನಿಷ್ಠ ಕೂಲಿಯ ಕಾಯ್ದೆ’ಯ ವ್ಯಾಪ್ತಿಗೆ ತಂದು ಇಎಸ್ಐ ಹಾಗೂ ಪಿಎಫ್ ಸೌಲಭ್ಯ ಕಲ್ಪಿಸಬೇಕು. ಅಂಗನವಾಡಿ ಕೇಂದ್ರಕ್ಕೆ ಪೂರೈಸುವ ಆಹಾರ ಪದಾರ್ಥಗಳ ಗುಣಮಟ್ಟ ಸರಿಯಿಲ್ಲದ ಕಾರಣ ಬಿಐಎಸ್ ಪರವಾನಗಿ ರದ್ದು ಮಾಡಬೇಕು. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯ ಆಹಾರ ಪೂರೈಸಬೇಕು ಎಂದು ಆಗ್ರಹಿಸಿದರು.</p>.<p>ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲಾಖೆಯಲ್ಲಿ ಖಾಲಿಯಿರುವ ಮೇಲ್ವಿಚಾರಕಿ, ಸಿಡಿಪಿಒ ಹುದ್ದೆಗಳನ್ನು ತುಂಬಬೇಕು. ಚುನಾವಣೆ ಕೆಲಸಗಳಿಂದ (ಬಿಎಲ್ಒ) ಅಂಗನವಾಡಿ ನೌಕರರನ್ನು ಬಿಡುಗಡೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಸಹಾಯಕಿ ಆಯ್ಕೆಗೆ ಇರುವ ಮಾನದಂಡ ಬದಲಾವಣೆ ಮಾಡಬೇಕು. ಸಾಮೂಹಿಕ ಆರೋಗ್ಯ ವಿಮೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರಿ ನೌಕರರು ಹಾಗೂ ಖಾಸಗಿ ವಲಯಗಳಲ್ಲಿ ದುಡಿಯುವ ಮಹಿಳೆಯರಿಗೆ ಜಾರಿ ಮಾಡಿರುವ ಮುಟ್ಟಿನ ರಜೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೂ ವಿಸ್ತರಿಸಬೇಕು. ಆರೋಗ್ಯ ಸಂಜೀವಿನಿ ಯೋಜನೆಯನ್ನೂ ನಮಗೂ ಅನ್ವಯ ಮಾಡಬೇಕು. ನಿವೃತ್ತರಾದವರಿಗೆ ಇಡುಗಂಟು ಹೆಚ್ಚಳ ಮಾಡಬೇಕು. ತಿಂಗಳಿಗೆ ₹10 ಸಾವಿರ ಪಿಂಚಣಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯ ನೇತೃತ್ವವನ್ನು ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಹಾಗೂ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನಿಷ್ಠ ವೇತನ ಜಾರಿಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.</p>.<p>2025ರ ನ.14ರಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದು ಮಾಡಬೇಕು. ಬಜೆಟ್ನಲ್ಲಿ ಘೋಷಿಸಿರುವಂತೆ 800 ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ–ಯುಕೆಜಿ ಆರಂಭಿಸುವಾಗ ಆ ಗ್ರಾಮಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>ಅಂಗನವಾಡಿ ಕಾರ್ಯಕರ್ತೆಯರನ್ನು ‘ಕನಿಷ್ಠ ಕೂಲಿಯ ಕಾಯ್ದೆ’ಯ ವ್ಯಾಪ್ತಿಗೆ ತಂದು ಇಎಸ್ಐ ಹಾಗೂ ಪಿಎಫ್ ಸೌಲಭ್ಯ ಕಲ್ಪಿಸಬೇಕು. ಅಂಗನವಾಡಿ ಕೇಂದ್ರಕ್ಕೆ ಪೂರೈಸುವ ಆಹಾರ ಪದಾರ್ಥಗಳ ಗುಣಮಟ್ಟ ಸರಿಯಿಲ್ಲದ ಕಾರಣ ಬಿಐಎಸ್ ಪರವಾನಗಿ ರದ್ದು ಮಾಡಬೇಕು. ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯ ಆಹಾರ ಪೂರೈಸಬೇಕು ಎಂದು ಆಗ್ರಹಿಸಿದರು.</p>.<p>ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲಾಖೆಯಲ್ಲಿ ಖಾಲಿಯಿರುವ ಮೇಲ್ವಿಚಾರಕಿ, ಸಿಡಿಪಿಒ ಹುದ್ದೆಗಳನ್ನು ತುಂಬಬೇಕು. ಚುನಾವಣೆ ಕೆಲಸಗಳಿಂದ (ಬಿಎಲ್ಒ) ಅಂಗನವಾಡಿ ನೌಕರರನ್ನು ಬಿಡುಗಡೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಸಹಾಯಕಿ ಆಯ್ಕೆಗೆ ಇರುವ ಮಾನದಂಡ ಬದಲಾವಣೆ ಮಾಡಬೇಕು. ಸಾಮೂಹಿಕ ಆರೋಗ್ಯ ವಿಮೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರಿ ನೌಕರರು ಹಾಗೂ ಖಾಸಗಿ ವಲಯಗಳಲ್ಲಿ ದುಡಿಯುವ ಮಹಿಳೆಯರಿಗೆ ಜಾರಿ ಮಾಡಿರುವ ಮುಟ್ಟಿನ ರಜೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೂ ವಿಸ್ತರಿಸಬೇಕು. ಆರೋಗ್ಯ ಸಂಜೀವಿನಿ ಯೋಜನೆಯನ್ನೂ ನಮಗೂ ಅನ್ವಯ ಮಾಡಬೇಕು. ನಿವೃತ್ತರಾದವರಿಗೆ ಇಡುಗಂಟು ಹೆಚ್ಚಳ ಮಾಡಬೇಕು. ತಿಂಗಳಿಗೆ ₹10 ಸಾವಿರ ಪಿಂಚಣಿ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆಯ ನೇತೃತ್ವವನ್ನು ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಹಾಗೂ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>