<p><strong>ಕೆ.ಆರ್.ಪುರ:</strong> ಇತಿಹಾಸ ಪ್ರಸಿದ್ಧ ಶ್ರೀ ಅಭಯ ವರಪ್ರದ ಆಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾಪನೆ ಮತ್ತು ಮಹಾ ಕುಂಭಾಭಿಷೇಕ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.</p>.<p>ವರಪ್ರದ ಆಂಜನೇಯ ಸ್ವಾಮಿ, ಕೆ.ಆರ್.ಪುರ ಸುತ್ತಮುತ್ತಲಿನ ಗ್ರಾಮಗಳ ಆರಾಧ್ಯ ದೈವವಾಗಿದೆ. ಸುಮಾರು ಐವತ್ತು ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ದೇವಾಲಯವನ್ನು ಭಕ್ತರ ಆಶಯದಂತೆ ಜೀರ್ಣೋದ್ಧಾರ ಮಾಡಲಾಗಿದೆ. </p>.<p>ಮಹಾಸಂಕಲ್ಪ, ವಿಶ್ವಾಕ್ಷೇನಾರಾಧನೆ, ಭಗವತ್ ಪುಣ್ಯಾಹವಾಚನ, ದ್ವಾರಾಧನೆ ದೇವಪಾರಾಯಣ, ಮಹಾಕುಂಭ, ಉಪಕುಂಭ ಸೇರಿದಂತೆ ವಿವಿಧ ಪೂಜೆಗಳು ನಡೆದವು. ಸಂಜೆ ಶ್ರೀಆಂಜನೇಯಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ನಡೆಯಿತು.</p>.<p>ಶಾಸಕ ಬೈರತಿ ಬಸವರಾಜ ಅವರು ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಧರ್ಮದರ್ಶಿಗಳಾದ ಕೆ.ಆರ್.ಸರಸ್ವತಮ್ಮ, ಹೇಮಂತ್ ಚಿನ್ನಿ, ಕೆ.ಆರ್.ತೇಜಸ್ ಬುಜ್ಜಿ ಕುಟುಂಬದವರು 15 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ ಏರ್ಪಡಿಸಿದ್ದರು. ದೇವಸ್ಥಾನದ ಅಧ್ಯಕ್ಷ ಕೆ.ಎನ್.ಎಲ್ಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಇತಿಹಾಸ ಪ್ರಸಿದ್ಧ ಶ್ರೀ ಅಭಯ ವರಪ್ರದ ಆಂಜನೇಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾಪನೆ ಮತ್ತು ಮಹಾ ಕುಂಭಾಭಿಷೇಕ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.</p>.<p>ವರಪ್ರದ ಆಂಜನೇಯ ಸ್ವಾಮಿ, ಕೆ.ಆರ್.ಪುರ ಸುತ್ತಮುತ್ತಲಿನ ಗ್ರಾಮಗಳ ಆರಾಧ್ಯ ದೈವವಾಗಿದೆ. ಸುಮಾರು ಐವತ್ತು ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ದೇವಾಲಯವನ್ನು ಭಕ್ತರ ಆಶಯದಂತೆ ಜೀರ್ಣೋದ್ಧಾರ ಮಾಡಲಾಗಿದೆ. </p>.<p>ಮಹಾಸಂಕಲ್ಪ, ವಿಶ್ವಾಕ್ಷೇನಾರಾಧನೆ, ಭಗವತ್ ಪುಣ್ಯಾಹವಾಚನ, ದ್ವಾರಾಧನೆ ದೇವಪಾರಾಯಣ, ಮಹಾಕುಂಭ, ಉಪಕುಂಭ ಸೇರಿದಂತೆ ವಿವಿಧ ಪೂಜೆಗಳು ನಡೆದವು. ಸಂಜೆ ಶ್ರೀಆಂಜನೇಯಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ನಡೆಯಿತು.</p>.<p>ಶಾಸಕ ಬೈರತಿ ಬಸವರಾಜ ಅವರು ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಧರ್ಮದರ್ಶಿಗಳಾದ ಕೆ.ಆರ್.ಸರಸ್ವತಮ್ಮ, ಹೇಮಂತ್ ಚಿನ್ನಿ, ಕೆ.ಆರ್.ತೇಜಸ್ ಬುಜ್ಜಿ ಕುಟುಂಬದವರು 15 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಅನ್ನದಾನ ಏರ್ಪಡಿಸಿದ್ದರು. ದೇವಸ್ಥಾನದ ಅಧ್ಯಕ್ಷ ಕೆ.ಎನ್.ಎಲ್ಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>