<p><strong>32.35 ಲಕ್ಷ ಜನರಿಗೆ ಅನ್ನಭಾಗ್ಯ</strong></p>.<p>ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನ್ನಭಾಗ್ಯ ಯೋಜನೆಯಡಿ 32,35,457 ಫಲಾನುಭವಿಗಳಿಗೆ ₹54.42 ಕೋಟಿ ವೆಚ್ಚ ಮಾಡಲಾಗಿದೆ ಎಂದು ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ ತಿಳಿಸಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆಯಾಗಿ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಪ್ರತಿ ಫಲಾನುಭವಿಗಳ ಮನೆ ಮುಂದೆ ರಂಗೋಲಿ ಬಿಡಿಸಿ ಮನೆ-ಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಗೃಹಲಕ್ಷ್ಮಿ ಯೋಜನೆಯಡಿ 2024ರ ಡಿಸೆಂಬರ್ ಅಂತ್ಯಕ್ಕೆ 8,80,415 ಫಲಾನುಭವಿಗಳಿಗೆ ₹176 ಕೋಟಿ ಭರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 33,21,262 ಫಲಾನುಭವಿಗಳಿದ್ದು, 2025ರ ಫೆಬ್ರುವರಿ ಅಂತ್ಯಕ್ಕೆ ₹222.12 ಕೋಟಿ, ಯುವನಿಧಿ ಯೋಜನೆಯಡಿ 12,470 ಫಲಾನುಭವಿಗಳಿಗೆ ₹3.72 ಕೋಟಿ, ಶಕ್ತಿ ಯೋಜನೆಯಡಿ 6,21,52,268 ಫಲಾನುಭವಿಗಳಿದ್ದು, ₹95.63 ಕೋಟಿ ಭರಿಸಲಾಗಿದೆ ಎಂದು ತಿಳಿಸಿದರು.</p>.<p><strong>ಅಕ್ರಮ ಒತ್ತುವರಿ ತೆರವು</strong></p>.<p>ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ಸುಮಾರು ₹34.17 ಕೋಟಿ ಮೌಲ್ಯದ ಒಟ್ಟು 12 ಎಕರೆ 0.25 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ. ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ.</p>.<p>ಬಿದರಹಳ್ಳಿ, ವರ್ತೂರು, ಸರ್ಜಾಪುರ, ತಾವರೆಕೆರೆ, ಯಲಹಂಕ, ಹೆಸರುಘಟ್ಟ, ದಾಸನಪುರ, ಯಶವಂತಪುರ ಹೋಬಳಿಯಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಕೆ. ನಾಯಕ್ ಹಾಗೂ ತಹಶೀಲ್ದಾರ್ಗಳು ಉಪಸ್ಥಿತರಿದ್ದರು.</p>.<p><strong>13ಕ್ಕೆ ‘ಪುಕ್ಕಟೆ ಸಲಹೆ’ ನಾಟಕದ ನೂರನೇ ಪ್ರದರ್ಶನ</strong></p>.<p>ಬೆಂಗಳೂರು: ವಿಶ್ವಪಥ ಕಲಾ ಸಂಗಮ ಹವ್ಯಾಸಿ ರಂಗತಂಡವು ಚುಟುಕು ಸಾಹಿತಿ ಎಚ್.ಡುಂಡಿರಾಜ್ ಅವರು ರಚಿಸಿರುವ ‘ಪುಕ್ಕಟೆ ಸಲಹೆ’ ಹಾಸ್ಯ ನಾಟಕದ 100ನೇ ಪ್ರದರ್ಶನವನ್ನು ಇದೇ 13ರಂದು ಸಂಜೆ 5 ಗಂಟೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಹಮ್ಮಿಕೊಂಡಿದೆ. </p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಟಕದ ನಿರ್ದೇಶಕ ಅಶೋಕ್ ಬಿ., ‘ನಾಟಕದ ನೂರನೇ ಪ್ರದರ್ಶನದ ಕಾರ್ಯಕ್ರಮದಲ್ಲಿ ನಾ. ದಾಮೋದರ ಶೆಟ್ಟಿ, ಬಿ.ಆರ್.ಲಕ್ಷ್ಮಣರಾವ್ ಸೇರಿ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸುತ್ತಾರೆ. ಈ ನಾಟಕವು ಜ್ಯೋತಿಷ್ಯದ ಅವಾಂತರಗಳ ಬಗ್ಗೆ ಹಾಸ್ಯ–ವಿಡಂಬನೆಯನ್ನು ಹೊಂದಿದೆ. 90 ನಿಮಿಷ ಅವಧಿಯ ನಾಟಕದಲ್ಲಿ 15ಕ್ಕೂ ಹೆಚ್ಚು ಕಲಾವಿದರು ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p><strong>ವೆಂಕಟೇಶ್ಗೆ ಕನ್ನಡ ಸಂಸ್ಕೃತಿ ಇಲಾಖೆ ಹೊಣೆ</strong></p>.<p>ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಎಂ.ವಿ.ವೆಂಕಟೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ.</p>.<p>ಈ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನಿಭಾಯಿಸುತ್ತಿದ್ದ ಮಂಜುಳಾ ಎನ್. ಅವರನ್ನು ಬಿಡುಗಡೆ ಮಾಡಿದ್ದರಿಂದ ತೆರವಾಗಿದ್ದ ಸ್ಥಾನವನ್ನು ವೆಂಕಟೇಶ್ ಅವರಿಗೆ ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>32.35 ಲಕ್ಷ ಜನರಿಗೆ ಅನ್ನಭಾಗ್ಯ</strong></p>.<p>ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನ್ನಭಾಗ್ಯ ಯೋಜನೆಯಡಿ 32,35,457 ಫಲಾನುಭವಿಗಳಿಗೆ ₹54.42 ಕೋಟಿ ವೆಚ್ಚ ಮಾಡಲಾಗಿದೆ ಎಂದು ಬಿಬಿಎಂಪಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ ತಿಳಿಸಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆಯಾಗಿ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಪ್ರತಿ ಫಲಾನುಭವಿಗಳ ಮನೆ ಮುಂದೆ ರಂಗೋಲಿ ಬಿಡಿಸಿ ಮನೆ-ಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಗೃಹಲಕ್ಷ್ಮಿ ಯೋಜನೆಯಡಿ 2024ರ ಡಿಸೆಂಬರ್ ಅಂತ್ಯಕ್ಕೆ 8,80,415 ಫಲಾನುಭವಿಗಳಿಗೆ ₹176 ಕೋಟಿ ಭರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 33,21,262 ಫಲಾನುಭವಿಗಳಿದ್ದು, 2025ರ ಫೆಬ್ರುವರಿ ಅಂತ್ಯಕ್ಕೆ ₹222.12 ಕೋಟಿ, ಯುವನಿಧಿ ಯೋಜನೆಯಡಿ 12,470 ಫಲಾನುಭವಿಗಳಿಗೆ ₹3.72 ಕೋಟಿ, ಶಕ್ತಿ ಯೋಜನೆಯಡಿ 6,21,52,268 ಫಲಾನುಭವಿಗಳಿದ್ದು, ₹95.63 ಕೋಟಿ ಭರಿಸಲಾಗಿದೆ ಎಂದು ತಿಳಿಸಿದರು.</p>.<p><strong>ಅಕ್ರಮ ಒತ್ತುವರಿ ತೆರವು</strong></p>.<p>ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ಸುಮಾರು ₹34.17 ಕೋಟಿ ಮೌಲ್ಯದ ಒಟ್ಟು 12 ಎಕರೆ 0.25 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ. ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ.</p>.<p>ಬಿದರಹಳ್ಳಿ, ವರ್ತೂರು, ಸರ್ಜಾಪುರ, ತಾವರೆಕೆರೆ, ಯಲಹಂಕ, ಹೆಸರುಘಟ್ಟ, ದಾಸನಪುರ, ಯಶವಂತಪುರ ಹೋಬಳಿಯಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಕೆ. ನಾಯಕ್ ಹಾಗೂ ತಹಶೀಲ್ದಾರ್ಗಳು ಉಪಸ್ಥಿತರಿದ್ದರು.</p>.<p><strong>13ಕ್ಕೆ ‘ಪುಕ್ಕಟೆ ಸಲಹೆ’ ನಾಟಕದ ನೂರನೇ ಪ್ರದರ್ಶನ</strong></p>.<p>ಬೆಂಗಳೂರು: ವಿಶ್ವಪಥ ಕಲಾ ಸಂಗಮ ಹವ್ಯಾಸಿ ರಂಗತಂಡವು ಚುಟುಕು ಸಾಹಿತಿ ಎಚ್.ಡುಂಡಿರಾಜ್ ಅವರು ರಚಿಸಿರುವ ‘ಪುಕ್ಕಟೆ ಸಲಹೆ’ ಹಾಸ್ಯ ನಾಟಕದ 100ನೇ ಪ್ರದರ್ಶನವನ್ನು ಇದೇ 13ರಂದು ಸಂಜೆ 5 ಗಂಟೆಗೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಹಮ್ಮಿಕೊಂಡಿದೆ. </p>.<p>ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಟಕದ ನಿರ್ದೇಶಕ ಅಶೋಕ್ ಬಿ., ‘ನಾಟಕದ ನೂರನೇ ಪ್ರದರ್ಶನದ ಕಾರ್ಯಕ್ರಮದಲ್ಲಿ ನಾ. ದಾಮೋದರ ಶೆಟ್ಟಿ, ಬಿ.ಆರ್.ಲಕ್ಷ್ಮಣರಾವ್ ಸೇರಿ ಸಾಹಿತ್ಯ ಕ್ಷೇತ್ರದ ಪ್ರಮುಖರು ಭಾಗವಹಿಸುತ್ತಾರೆ. ಈ ನಾಟಕವು ಜ್ಯೋತಿಷ್ಯದ ಅವಾಂತರಗಳ ಬಗ್ಗೆ ಹಾಸ್ಯ–ವಿಡಂಬನೆಯನ್ನು ಹೊಂದಿದೆ. 90 ನಿಮಿಷ ಅವಧಿಯ ನಾಟಕದಲ್ಲಿ 15ಕ್ಕೂ ಹೆಚ್ಚು ಕಲಾವಿದರು ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p><strong>ವೆಂಕಟೇಶ್ಗೆ ಕನ್ನಡ ಸಂಸ್ಕೃತಿ ಇಲಾಖೆ ಹೊಣೆ</strong></p>.<p>ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಎಂ.ವಿ.ವೆಂಕಟೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ.</p>.<p>ಈ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನಿಭಾಯಿಸುತ್ತಿದ್ದ ಮಂಜುಳಾ ಎನ್. ಅವರನ್ನು ಬಿಡುಗಡೆ ಮಾಡಿದ್ದರಿಂದ ತೆರವಾಗಿದ್ದ ಸ್ಥಾನವನ್ನು ವೆಂಕಟೇಶ್ ಅವರಿಗೆ ವಹಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>