‘ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಜನಪರ ಯೋಜನೆಗಳನ್ನು ರೂಪಿಸುತ್ತಿದ್ದು ಕುಡಿಯುವ ನೀರು ಸರಬರಾಜು, ಚರಂಡಿ, ರಸ್ತೆ, ಸಮುದಾಯ ಭವನ, ಬಡಾವಣೆಗಳಿಗೆ ಸಂಪರ್ಕ ರಸ್ತೆ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಂಡು ಸೌಲಭ್ಯ ಒದಗಿಸಲಾಗುತ್ತದೆ. ಪರಿಸರವನ್ನು ಪರಿಣಾಮಕಾರಿಯಾಗಿ ಉಳಿಸಲು ಕೆರೆ ಅಭಿವೃದ್ಧಿ, ರಸ್ತೆ ಬದಿ ಗಿಡ ನೆಡುವ ಕಾರ್ಯ, ಸ್ವಚ್ಚ ಭಾರತ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಾದರಿ ಕ್ಷೇತ್ರ ಮಾಡುವ ಗುರಿ ಹೊಂದಲಾಗಿದೆ’ ಎಂದರು.