<p><strong>ಬೆಂಗಳೂರು:</strong>‘ದೇಶದ್ರೋಹ’ ಆರೋಪದಡಿ ಜೈಲು ಸೇರಿರುವ ಅಮೂಲ್ಯಾ ಲಿಯೋನ್ (19) ಅವರ ಸ್ನೇಹಿತರು ಹಾಗೂ ಪ್ರತಿಭಟನೆ ಆಯೋಜಕರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆಹಾಕಿರುವ ಪಶ್ಚಿಮ ವಿಭಾಗದ ಪೊಲೀಸರು, ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯಾಳನ್ನು ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಅಮೂಲ್ಯಾಳ ಜೊತೆ ಕೆಲ ಸ್ನೇಹಿತರು ಪಾಲ್ಗೊಳ್ಳುತ್ತಿದ್ದರು. ಕಾಲೇಜಿನಲ್ಲೂ ಕೆಲ ಸ್ನೇಹಿತೆಯರು ಆಕೆ ಜೊತೆ ಒಡನಾಟವಿಟ್ಟುಕೊಂಡಿದ್ದರು. ಅವರೆಲ್ಲರನ್ನೂ ಉಪ್ಪಾರಪೇಟೆ ಠಾಣೆಗೆ ಸೋಮವಾರ ಕರೆಸಿಕೊಂಡಿದ್ದ ಪೊಲೀಸರು, ಕೆಲ ಗಂಟೆ ವಿಚಾರಣೆ ನಡೆಸಿದರು.</p>.<p>ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅಮೂಲ್ಯಾ, ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಆರಂಭದಲ್ಲಿ ಸ್ನೇಹಿತರ ಜೊತೆಯಲ್ಲಿ ಕಾಲ ಕಳೆಯುತ್ತಿದ್ದರು. ಸಿಎಎ ವಿರುದ್ಧ ಪ್ರತಿಭಟನೆಗಳು ಆರಂಭವಾಗುತ್ತಿದ್ದಂತೆ, ಅವುಗಳತ್ತ ವಾಲಿದ್ದರು. ಈ ಸಂಬಂಧ ಆಕೆ ಹಲವು ಸ್ನೇಹಿತರ ಜೊತೆಯಲ್ಲಿ ಚರ್ಚಿಸಿದ್ದರು ಎಂಬ ಸಂಗತಿ ತನಿಖೆಯಿಂದ ಗೊತ್ತಾಗಿತ್ತು.</p>.<p class="Subhead">ಪಾಲಿಕೆ ಸದಸ್ಯನ ವಿಚಾರಣೆ: ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆಯೋಜನೆಗೆ ಅನುಮತಿ ಪಡೆದಿದ್ದ ಪಾದರಾಯನಪುರ ವಾರ್ಡ್ ಸದಸ್ಯ ಇಮ್ರಾನ್ ಪಾಷಾ ಅವರನ್ನು ಎರಡನೇ ಬಾರಿ ವಿಚಾರಣೆಗೆ ಕರೆಸಲು ಸಿದ್ಧತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ದೇಶದ್ರೋಹ’ ಆರೋಪದಡಿ ಜೈಲು ಸೇರಿರುವ ಅಮೂಲ್ಯಾ ಲಿಯೋನ್ (19) ಅವರ ಸ್ನೇಹಿತರು ಹಾಗೂ ಪ್ರತಿಭಟನೆ ಆಯೋಜಕರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆಹಾಕಿರುವ ಪಶ್ಚಿಮ ವಿಭಾಗದ ಪೊಲೀಸರು, ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯಾಳನ್ನು ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಅಮೂಲ್ಯಾಳ ಜೊತೆ ಕೆಲ ಸ್ನೇಹಿತರು ಪಾಲ್ಗೊಳ್ಳುತ್ತಿದ್ದರು. ಕಾಲೇಜಿನಲ್ಲೂ ಕೆಲ ಸ್ನೇಹಿತೆಯರು ಆಕೆ ಜೊತೆ ಒಡನಾಟವಿಟ್ಟುಕೊಂಡಿದ್ದರು. ಅವರೆಲ್ಲರನ್ನೂ ಉಪ್ಪಾರಪೇಟೆ ಠಾಣೆಗೆ ಸೋಮವಾರ ಕರೆಸಿಕೊಂಡಿದ್ದ ಪೊಲೀಸರು, ಕೆಲ ಗಂಟೆ ವಿಚಾರಣೆ ನಡೆಸಿದರು.</p>.<p>ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅಮೂಲ್ಯಾ, ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಆರಂಭದಲ್ಲಿ ಸ್ನೇಹಿತರ ಜೊತೆಯಲ್ಲಿ ಕಾಲ ಕಳೆಯುತ್ತಿದ್ದರು. ಸಿಎಎ ವಿರುದ್ಧ ಪ್ರತಿಭಟನೆಗಳು ಆರಂಭವಾಗುತ್ತಿದ್ದಂತೆ, ಅವುಗಳತ್ತ ವಾಲಿದ್ದರು. ಈ ಸಂಬಂಧ ಆಕೆ ಹಲವು ಸ್ನೇಹಿತರ ಜೊತೆಯಲ್ಲಿ ಚರ್ಚಿಸಿದ್ದರು ಎಂಬ ಸಂಗತಿ ತನಿಖೆಯಿಂದ ಗೊತ್ತಾಗಿತ್ತು.</p>.<p class="Subhead">ಪಾಲಿಕೆ ಸದಸ್ಯನ ವಿಚಾರಣೆ: ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆಯೋಜನೆಗೆ ಅನುಮತಿ ಪಡೆದಿದ್ದ ಪಾದರಾಯನಪುರ ವಾರ್ಡ್ ಸದಸ್ಯ ಇಮ್ರಾನ್ ಪಾಷಾ ಅವರನ್ನು ಎರಡನೇ ಬಾರಿ ವಿಚಾರಣೆಗೆ ಕರೆಸಲು ಸಿದ್ಧತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>