ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಅಮೂಲ್ಯಾ, ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದಿದ್ದರು. ಆರಂಭದಲ್ಲಿ ಸ್ನೇಹಿತರ ಜೊತೆಯಲ್ಲಿ ಕಾಲ ಕಳೆಯುತ್ತಿದ್ದರು. ಸಿಎಎ ವಿರುದ್ಧ ಪ್ರತಿಭಟನೆಗಳು ಆರಂಭವಾಗುತ್ತಿದ್ದಂತೆ, ಅವುಗಳತ್ತ ವಾಲಿದ್ದರು. ಈ ಸಂಬಂಧ ಆಕೆ ಹಲವು ಸ್ನೇಹಿತರ ಜೊತೆಯಲ್ಲಿ ಚರ್ಚಿಸಿದ್ದರು ಎಂಬ ಸಂಗತಿ ತನಿಖೆಯಿಂದ ಗೊತ್ತಾಗಿತ್ತು.