ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಅಬ್ದುಲ್ ವಾಜಿದ್, ‘ಚುನಾಯಿತ ಕೌನ್ಸಿಲ್ನಲ್ಲಿ ಬಜೆಟ್ ಕುರಿತು ಸುದೀರ್ಘ ಚರ್ಚೆ ನಡೆಯುತ್ತಿತ್ತು. ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಬೇಕು, ಯಾವುದಕ್ಕೆ ನೀಡಬಾರದು ಎಂಬುದರ ಬಗ್ಗೆ ಎಲ್ಲಾ ಸದಸ್ಯರ ಅಭಿಪ್ರಾಯ ಕೇಳಲಾಗುತ್ತಿತ್ತು. ಆದರೆ ಈಗ ಯಾರೊಂದಿಗೂ ಚರ್ಚಿಸದೇ ನೇರವಾಗಿ ಬಜೆಟ್ ಮಂಡಿಸಲಾಗಿದೆ’ ಎಂದರು.