ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್‌ ಸಿಂಧೂರಿ–ಐಪಿಎಸ್ ರೂಪಾ ಜಗಳ: ತನಿಖೆಗೆ ಆಗ್ರಹ

Last Updated 20 ಫೆಬ್ರುವರಿ 2023, 14:25 IST
ಅಕ್ಷರ ಗಾತ್ರ

ಬೆಂಗಳೂರು: ‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಮಾಡಿರುವ ಆರೋಪಗಳಲ್ಲಿ ಗಂಭೀರ ವಿಷಯ ಮರೆಯಾಗುತ್ತಿದ್ದು ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕು‘ ಎಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್‌ ಆಗ್ರಹಿಸಿದ್ದಾರೆ.

ಈ ಕುರಿತಂತೆ ಹೇಳಿಕೆ ನೀಡಿರುವ ಅವರು, ‘ಪ್ರಾಮಾಣಿಕ ಅಧಿಕಾರಿ ಎಂಬಂತೆ ವರ್ತಿಸುತ್ತಿರುವ ರೂಪಾ ಅವರ ಪತಿ ಮನೀಶ್ ಮೌದ್ಗಿಲ್ ಸರ್ವೇ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ರೋಹಿಣಿ ಸಿಂಧೂರಿ ಸೂಚಿಸಿದವರಿಗೆ ಕೆಲಸ ಮಾಡಿಕೊಟ್ಟಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದ್ದರಿಂದ, ಈ ಪ್ರಕರಣದಲ್ಲಿ ಮನೀಶ್ ಮೌದ್ಗಿಲ್ ಅವರ ಮೇಲೂ ತನಿಖೆ ನಡೆಯಬೇಕು ಮತ್ತು ಜನರಿಗೆ ಸತ್ಯಾಂಶ ತಿಳಿಯುವಂತಾಗಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT