<p><strong>ಬೆಂಗಳೂರು:</strong> ‘ನಂದಿನಿ ಪಾರ್ಲರ್ಗಳಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸುವುದರ ಜತೆಗೆಅಪಾರ್ಟ್ಮೆಂಟ್ಗಳಿಗೆ ಅವುಗಳನ್ನು ನೇರವಾಗಿ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.</p>.<p>ಬ್ಯಾಟರಾಯನಪುರ, ದಾಸನಪುರ ಕೃಷಿ ಮಾರುಕಟ್ಟೆಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ, ಆಹಾರ ಸಚಿವ ಕೆ. ಗೋಪಾಲಯ್ಯ ಮತ್ತು ತೋಟಗಾರಿಕಾ ಸಚಿವ ನಾರಾಯಣಗೌಡ ಜತೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮೇಯರ್ ಕಚೇರಿಯಲ್ಲಿ ಸಭೆ ನಡೆಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಂದಿನಿ ಪಾರ್ಲರ್ಗಳಲ್ಲಿ ತರಕಾರಿ ಮತ್ತು ಹಣ್ಣು ಮಾರಾಟ ಸಂಬಂಧ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಚರ್ಚಿಸಲಾಗಿದೆ. ಅನುಮತಿ ನೀಡುವುದಾಗಿ ಅವರು ತಿಳಿಸಿದ್ದಾರೆ’ ಎಂದರು.</p>.<p>ಅಪಾರ್ಟ್ಮೆಂಟ್ಗಳಿಗೆ ನೇರವಾಗಿ ಹಣ್ಣು ಮತ್ತು ತರಕಾರಿಯನ್ನು ಹಾಪ್ಕಾಮ್ಸ್ ಮೂಲಕ ತಲುಪಿಸಬೇಕಿದೆ. ಈ ಸಂಬಂಧ ಮೇಯರ್ ಮತ್ತು ಪಾಲಿಕೆಯ ಎಲ್ಲಾ ಸದಸ್ಯರ ಸಹಕಾರ ಕೇಳಲಾಗಿದೆ. ಮೇಯರ್ ಅವರು ಶನಿವಾರ ಹಾಪ್ಕಾಮ್ಸ್ ಮತ್ತು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಟನೆಗಳ ಜತೆ ವಿಡಿಯೊ ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು.</p>.<p>ರೈತರು ಮತ್ತು ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಬಿ.ಸಿ. ಪಾಟೀಲ ಮತ್ತು ನಾರಾಯಣಗೌಡ ಹೇಳಿದರು.</p>.<p><strong>ಹಣ್ಣು, ತರಕಾರಿ ಪೂರೈಕೆಗೆ ಹಾಪ್ಕಾಮ್ಸ್</strong><br /><strong>ಬೆಂಗಳೂರು:</strong> ‘ರಾಜ್ಯದಲ್ಲಿರುವ 450 ಹಾಪ್ಕಾಮ್ಸ್ ಮೂಲಕ ಪ್ರತಿದಿನ 400 ರಿಂದ 450 ಟನ್ಗಳಷ್ಟು ಹಣ್ಣು ಮತ್ತು ತರಕಾರಿ ಸರಬರಾಜಾಗುತ್ತಿದೆ‘ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.</p>.<p>‘ಬೆಂಗಳೂರಿನಲ್ಲಿ 220 ಮಳಿಗೆಗಳು ಮತ್ತು 40 ಮೊಬೈಲ್ ಘಟಕಗಳ ಮೂಲಕ ಪ್ರತಿದಿನ 120 ಟನ್ ಹಣ್ಣು, ತರಕಾರಿ ಮಾರಾಟ ಮಾಡಲಾಗುತ್ತಿದೆ’ ಎಂದು ಶುಕ್ರವಾರ ಇಲ್ಲಿ ಮಾಧ್ಯಮದವರಿಗೆ ತಿಳಿಸಿದರು.</p>.<p>‘ಶಿವಮೊಗ್ಗದಲ್ಲಿ 28 ಟನ್, ಬೆಳಗಾವಿಯಲ್ಲಿ 40 ಟನ್ ವ್ಯಾಪಾರವಾಗಿದೆ’ ಎಂದರು.</p>.<p><strong>ಶುದ್ಧ ನೀರು ಉಚಿತ</strong><br />198 ವಾರ್ಡ್ಗಳಲ್ಲೂ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ₹5ಕ್ಕೆ ಸಿಗುತ್ತಿದ್ದ 20 ಲೀಟರ್ ನೀರನ್ನು ಇದೇ 21ರಿಂದ ಉಚಿತವಾಗಿ ನೀಡಲು ಚಿಂತಿಸಲಾಗಿದೆ ಎಂದು ಸೋಮಶೇಖರ್ ತಿಳಿಸಿದರು.</p>.<p>ಈ ಪ್ರಸ್ತಾವನೆಗೆ ಮೇಯರ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಂದಿನಿ ಪಾರ್ಲರ್ಗಳಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸುವುದರ ಜತೆಗೆಅಪಾರ್ಟ್ಮೆಂಟ್ಗಳಿಗೆ ಅವುಗಳನ್ನು ನೇರವಾಗಿ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.</p>.<p>ಬ್ಯಾಟರಾಯನಪುರ, ದಾಸನಪುರ ಕೃಷಿ ಮಾರುಕಟ್ಟೆಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ, ಆಹಾರ ಸಚಿವ ಕೆ. ಗೋಪಾಲಯ್ಯ ಮತ್ತು ತೋಟಗಾರಿಕಾ ಸಚಿವ ನಾರಾಯಣಗೌಡ ಜತೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮೇಯರ್ ಕಚೇರಿಯಲ್ಲಿ ಸಭೆ ನಡೆಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಂದಿನಿ ಪಾರ್ಲರ್ಗಳಲ್ಲಿ ತರಕಾರಿ ಮತ್ತು ಹಣ್ಣು ಮಾರಾಟ ಸಂಬಂಧ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಚರ್ಚಿಸಲಾಗಿದೆ. ಅನುಮತಿ ನೀಡುವುದಾಗಿ ಅವರು ತಿಳಿಸಿದ್ದಾರೆ’ ಎಂದರು.</p>.<p>ಅಪಾರ್ಟ್ಮೆಂಟ್ಗಳಿಗೆ ನೇರವಾಗಿ ಹಣ್ಣು ಮತ್ತು ತರಕಾರಿಯನ್ನು ಹಾಪ್ಕಾಮ್ಸ್ ಮೂಲಕ ತಲುಪಿಸಬೇಕಿದೆ. ಈ ಸಂಬಂಧ ಮೇಯರ್ ಮತ್ತು ಪಾಲಿಕೆಯ ಎಲ್ಲಾ ಸದಸ್ಯರ ಸಹಕಾರ ಕೇಳಲಾಗಿದೆ. ಮೇಯರ್ ಅವರು ಶನಿವಾರ ಹಾಪ್ಕಾಮ್ಸ್ ಮತ್ತು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಟನೆಗಳ ಜತೆ ವಿಡಿಯೊ ಸಂವಾದ ನಡೆಸಲಿದ್ದಾರೆ ಎಂದು ಹೇಳಿದರು.</p>.<p>ರೈತರು ಮತ್ತು ಗ್ರಾಹಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಬಿ.ಸಿ. ಪಾಟೀಲ ಮತ್ತು ನಾರಾಯಣಗೌಡ ಹೇಳಿದರು.</p>.<p><strong>ಹಣ್ಣು, ತರಕಾರಿ ಪೂರೈಕೆಗೆ ಹಾಪ್ಕಾಮ್ಸ್</strong><br /><strong>ಬೆಂಗಳೂರು:</strong> ‘ರಾಜ್ಯದಲ್ಲಿರುವ 450 ಹಾಪ್ಕಾಮ್ಸ್ ಮೂಲಕ ಪ್ರತಿದಿನ 400 ರಿಂದ 450 ಟನ್ಗಳಷ್ಟು ಹಣ್ಣು ಮತ್ತು ತರಕಾರಿ ಸರಬರಾಜಾಗುತ್ತಿದೆ‘ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.</p>.<p>‘ಬೆಂಗಳೂರಿನಲ್ಲಿ 220 ಮಳಿಗೆಗಳು ಮತ್ತು 40 ಮೊಬೈಲ್ ಘಟಕಗಳ ಮೂಲಕ ಪ್ರತಿದಿನ 120 ಟನ್ ಹಣ್ಣು, ತರಕಾರಿ ಮಾರಾಟ ಮಾಡಲಾಗುತ್ತಿದೆ’ ಎಂದು ಶುಕ್ರವಾರ ಇಲ್ಲಿ ಮಾಧ್ಯಮದವರಿಗೆ ತಿಳಿಸಿದರು.</p>.<p>‘ಶಿವಮೊಗ್ಗದಲ್ಲಿ 28 ಟನ್, ಬೆಳಗಾವಿಯಲ್ಲಿ 40 ಟನ್ ವ್ಯಾಪಾರವಾಗಿದೆ’ ಎಂದರು.</p>.<p><strong>ಶುದ್ಧ ನೀರು ಉಚಿತ</strong><br />198 ವಾರ್ಡ್ಗಳಲ್ಲೂ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ₹5ಕ್ಕೆ ಸಿಗುತ್ತಿದ್ದ 20 ಲೀಟರ್ ನೀರನ್ನು ಇದೇ 21ರಿಂದ ಉಚಿತವಾಗಿ ನೀಡಲು ಚಿಂತಿಸಲಾಗಿದೆ ಎಂದು ಸೋಮಶೇಖರ್ ತಿಳಿಸಿದರು.</p>.<p>ಈ ಪ್ರಸ್ತಾವನೆಗೆ ಮೇಯರ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>