ಬೆಂಗಳೂರು: ಮೈಸೂರು ರಸ್ತೆ, ಕನಕಪುರ ರಸ್ತೆ, ವಿಮಾನ ನಿಲ್ದಾಣ ರಸ್ತೆ, ಹೊಸೂರು ರಸ್ತೆ ಹಾಗೂ ಕೋಲಾರ ರಸ್ತೆಗಳಲ್ಲಿ ಆಧುನಿಕ ತಂತ್ರಜ್ಞಾನದ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಮಾರುಕಟ್ಟೆ ನಿರ್ಮಿಸಲಾಗುವುದುಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಇಲ್ಲಿ ಮಂಗಳವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಬೆಂಗಳೂರು ಸುತ್ತಮುತ್ತ ಕನಿಷ್ಠ 20 ಸ್ಥಳಗಳಲ್ಲಿ ಹೊಸದಾಗಿ ಎಪಿಎಂಸಿ ಮಾರುಕಟ್ಟೆ ನಿರ್ಮಿಸುವುದಕ್ಕಾಗಿ ಸರ್ಕಾರಿ ಜಮೀನನ್ನು ಗುರುತಿಸಲು ಸೂಚಿಸಿದರು.
ಸಿಂಗೇನ ಅಗ್ರಹಾರದ 42 ಎಕರೆ ಭೂಸ್ವಾಧೀನ ಪ್ರಸ್ತಾವಕ್ಕೆ ಅನುಮೋದನೆ ನೀಡುವಂತೆ ಸೂಚಿಸಿದರು. ನ್ಯಾಯಾಲಯಗಳಲ್ಲಿ ಬಾಕಿ ಇರುವ ಭೂಸ್ವಾಧೀನ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸೂಚಿಸಿದರು.