ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದ ಇಬ್ಬರೂ ಅಧಿಕಾರಿಗಳು, ‘ನಮ್ಮಿಂದ ತಪ್ಪಾಗಿದೆ. ಅದಕ್ಕಾಗಿ ನ್ಯಾಯಾಲಯದ ಕ್ಷಮೆ ಯಾಚಿಸುತ್ತೇವೆ. ಆಗಿರುವ ಎಲ್ಲ ತಪ್ಪು ತಿದ್ದಿಕೊಂಡು ಕೋರ್ಟ್ ಆದೇಶ ಪಾಲನೆ ಮಾಡಲಾಗುವುದು. ನಗರದ ಕಂಟೈನ್ಮೆಂಟ್ ವಲಯಗಳಲ್ಲಿ ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿ ಮಾಡುತ್ತೇವೆ. ಅಲ್ಲಿನ ಬಡ ಹಾಗೂ ನಿರ್ಗತಿಕರನ್ನು ಗುರುತಿಸಿ ಆಹಾರ ಪೂರೈಸುತ್ತೇವೆ. ಇದನ್ನು ದೃಢೀಕರಿಸಿ ಪ್ರಮಾಣ ಪತ್ರ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.