<p><strong>ಬೆಂಗಳೂರು:</strong> ಬಜೆಟ್ನಲ್ಲಿ ವಕೀಲರಿಗೆ ಮತ್ತು ನ್ಯಾಯಾಂಗ ಇಲಾಖೆಗೆ ಹೆಚ್ಚು ಅನುದಾನ ನೀಡುವಂತೆ ಬಿಜೆಪಿ ಕಾನೂನು ಪ್ರಕೋಷ್ಠವು ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.</p>.<p>ರಾಜ್ಯದಲ್ಲಿ ಒಟ್ಟು 1.11 ಲಕ್ಷಕ್ಕೂ ಹೆಚ್ಚು ವಕೀಲರು ಇದ್ದು, 200 ವಕೀಲರ ಸಂಘಗಳಿವೆ. ಈ ವಕೀಲರ ಹಾಗೂ ವಕೀಲರ ಸಂಘಗಳ ಮೂಲ ಬೆಂಗಳೂರಿನ ಕರ್ನಾಟಕ ರಾಜ್ಯ ವಕೀಲರ ಪರಿಷತ್. ಹಳೆಯ ಚುನಾವಣಾ ಆಯೋಗದ ಕಟ್ಟಡವನ್ನು ತಾತ್ಕಾಲಿಕವಾಗಿ ಪರಿಷತ್ತಿಗೆ ನೀಡಲಾಗಿದೆ. ಅದರ ಸಂಪೂರ್ಣ ಸ್ವಾಧೀನತೆಯನ್ನು ರಾಜ್ಯ ವಕೀಲರ ಪರಿಷತ್ತಿಗೇ ನೀಡಬೇಕು ಎಂದು ಮನವಿ ಮಾಡಲಾಗಿದೆ.</p>.<p>ವಕೀಲರಿಗೆ ಹಾಗೂ ಅವರ ಕುಟುಂಬಕ್ಕೆ ಆರೋಗ್ಯ ವಿಮೆ ಕಲ್ಪಿಸಲು ಬಜೆಟ್ನಲ್ಲಿ ಅನುದಾನ ಘೋಷಿಸಬೇಕು. ರಾಜ್ಯದಲ್ಲಿ ಸಹಾಯಕ ಸರ್ಕಾರಿ ವಕೀಲರು ಹಾಗೂ ಸ್ಪೆಷಲ್ ಪಿ.ಪಿ, ಎಜಿಪಿ, ಡಿಜಿಪಿ, ಜಿಎ,ಜಿಪಿ ಖಾಲಿ ಇದ್ದ ಹುದ್ದೆಗಳನ್ನು ಆದಷ್ಟು ಶೀಘ್ರ ಭರ್ತಿ ಮಾಡಬೇಕು ಎಂದು ಕೋರಲಾಯಿತು.</p>.<p>ಕಾನೂನು ಪ್ರಕೋಷ್ಠದ ಸಂಚಾಲಕ ಎಸ್.ಎಸ್. ಮಿಟ್ಟಲಕೋಡ್, ಪ್ರಕೋಷ್ಠದ ಸಹ ಸಂಚಾಲಕ ಯೋಗೇಂದ್ರ ಹೊಡಾಘಟ್ಟ, ಮಾಜಿ ಸಂಚಾಲಕ ವಿವೇಕ್ ರೆಡ್ಡಿ ಮತ್ತು ಆರ್. ರಾಜಣ್ಣ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಜೆಟ್ನಲ್ಲಿ ವಕೀಲರಿಗೆ ಮತ್ತು ನ್ಯಾಯಾಂಗ ಇಲಾಖೆಗೆ ಹೆಚ್ಚು ಅನುದಾನ ನೀಡುವಂತೆ ಬಿಜೆಪಿ ಕಾನೂನು ಪ್ರಕೋಷ್ಠವು ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.</p>.<p>ರಾಜ್ಯದಲ್ಲಿ ಒಟ್ಟು 1.11 ಲಕ್ಷಕ್ಕೂ ಹೆಚ್ಚು ವಕೀಲರು ಇದ್ದು, 200 ವಕೀಲರ ಸಂಘಗಳಿವೆ. ಈ ವಕೀಲರ ಹಾಗೂ ವಕೀಲರ ಸಂಘಗಳ ಮೂಲ ಬೆಂಗಳೂರಿನ ಕರ್ನಾಟಕ ರಾಜ್ಯ ವಕೀಲರ ಪರಿಷತ್. ಹಳೆಯ ಚುನಾವಣಾ ಆಯೋಗದ ಕಟ್ಟಡವನ್ನು ತಾತ್ಕಾಲಿಕವಾಗಿ ಪರಿಷತ್ತಿಗೆ ನೀಡಲಾಗಿದೆ. ಅದರ ಸಂಪೂರ್ಣ ಸ್ವಾಧೀನತೆಯನ್ನು ರಾಜ್ಯ ವಕೀಲರ ಪರಿಷತ್ತಿಗೇ ನೀಡಬೇಕು ಎಂದು ಮನವಿ ಮಾಡಲಾಗಿದೆ.</p>.<p>ವಕೀಲರಿಗೆ ಹಾಗೂ ಅವರ ಕುಟುಂಬಕ್ಕೆ ಆರೋಗ್ಯ ವಿಮೆ ಕಲ್ಪಿಸಲು ಬಜೆಟ್ನಲ್ಲಿ ಅನುದಾನ ಘೋಷಿಸಬೇಕು. ರಾಜ್ಯದಲ್ಲಿ ಸಹಾಯಕ ಸರ್ಕಾರಿ ವಕೀಲರು ಹಾಗೂ ಸ್ಪೆಷಲ್ ಪಿ.ಪಿ, ಎಜಿಪಿ, ಡಿಜಿಪಿ, ಜಿಎ,ಜಿಪಿ ಖಾಲಿ ಇದ್ದ ಹುದ್ದೆಗಳನ್ನು ಆದಷ್ಟು ಶೀಘ್ರ ಭರ್ತಿ ಮಾಡಬೇಕು ಎಂದು ಕೋರಲಾಯಿತು.</p>.<p>ಕಾನೂನು ಪ್ರಕೋಷ್ಠದ ಸಂಚಾಲಕ ಎಸ್.ಎಸ್. ಮಿಟ್ಟಲಕೋಡ್, ಪ್ರಕೋಷ್ಠದ ಸಹ ಸಂಚಾಲಕ ಯೋಗೇಂದ್ರ ಹೊಡಾಘಟ್ಟ, ಮಾಜಿ ಸಂಚಾಲಕ ವಿವೇಕ್ ರೆಡ್ಡಿ ಮತ್ತು ಆರ್. ರಾಜಣ್ಣ ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>