ಸಮಿತಿ ಅಧ್ಯಕ್ಷ ಆರ್. ಮಧುಸೂದನ್ ಅಧ್ಯಕ್ಷತೆ ವಹಿಸಿದ್ದರು. ಅರೆಮಾದನಹಳ್ಳಿ ಮಠದ ಅನಂತಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಸ್ವಾಮೀಜಿ, ಆನೆಗೊಂದಿ ಮಠದ ಕಾಳಹಸ್ತೇಂದ್ರ ಸ್ವಾಮೀಜಿ, ಮಧುಗಿರಿಯ ನೀಲಕಂಠಾಚಾರ್ಯ ಸ್ವಾಮೀಜಿ, ನಿವೃತ್ತ ಐಎಎಸ್ ಅಧಿಕಾರಿ ಪಿ.ಎನ್. ಶ್ರೀನಿವಾಸಾಚಾರಿ, ನಿವೃತ್ತ ಕೆಎಎಸ್ ಅಧಿಕಾರಿ ಬಿ.ಎಲ್. ವೇದಮೂರ್ತಿ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಆಯುಕ್ತ ಮಾಲಿಗಾಚಾರ್, ವಕೀಲ ರುದ್ರಾಚಾರ್ ಉಪಸ್ಥಿತರಿದ್ದರು.