‘ಬದಲಾದ ಜೀವನ ವಿಧಾನ, ಪಾಶ್ಚಾತ್ಯ ಆಹಾರ ಪದ್ಧತಿ, ವಾಯುಮಾಲಿನ್ಯ ಸೇರಿ ವಿವಿಧ ಕಾರಣಗಳಿಂದ ಕ್ಯಾನ್ಸರ್, ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್ ಪತ್ತೆ ಮಾಡಿದಲ್ಲಿ ಸುಲಭವಾಗಿ ಕಾಯಿಲೆಯನ್ನು ವಾಸಿ ಮಾಡಬಹುದು. ಆದ್ದರಿಂದ ಈ ಬಗ್ಗೆ ಕ್ರಮವಹಿಸಲಾಗಿದೆ. ಕ್ಯಾನ್ಸರ್ ಲಸಿಕೆ ದುಬಾರಿ ಆಗಿರುವುದರಿಂದ ಎಲ್ಲರಿಗೂ ಪಡೆಯಲು ಸಾಧ್ಯವಾಗುವುದಿಲ್ಲ’ ಎಂದು ಹೇಳಿದರು.