‘ನಮ್ಮ ಅಧಿಕಾರಿಗಳ ಜೊತೆ ಕೇಂದ್ರ ತಂಡ ಸ್ಥಳ ವೀಕ್ಷಣೆ ಮಾಡಿದೆ. ಆಯಾ ಜಿಲ್ಲಾಧಿಕಾರಿಗಳು ಪ್ರವಾಹದ ಪೋಟೋ ನೀಡಿದ್ದಾರೆ. ತಂಡದ ಮುಖ್ಯಮಂತ್ರಿ ಜೊತೆ ಕೂಡ ಸಭೆ ನಡೆಸಿದೆ. 3,31,170 ಹೆಕ್ಟೇರ್ ಪ್ರದೇಶ ಕೃಷಿ ಹಾನಿ, 32,976 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆ, 10,978 ಮನೆಗಳಿಗೆ ಹಾನಿಯಾಗಿದೆ. 14,182 ಕಿ. ಮೀ ರಸ್ತೆ ಹಾನಿಯಾಗಿದೆ. 1,268 ಸೇತುವೆಗಳು, 360 ಕೆರೆಗಳಿಗೆ ಹಾನಿಯಾಗಿದೆ. 3,168 ಸರ್ಕಾರಿ ಕಟ್ಟಡಗಳಿಗೂ ಹಾನಿಯಾಗಿದೆ’ ಎಂದು ಅವರು ವಿವರಿಸಿದರು.