ಆಲಮಟ್ಟಿ ಜಲಾಶಯದ ಹಿನ್ನೀರಿನಿಂದಾಗಿ ನಮ್ಮ ಭಾಗದ ರೈತರು ಮನೆ–ಮಠ, ಜಮೀನನ್ನು ಕಳೆದುಕೊಂಡಿದ್ದಾರೆ. ದಯನೀಯ ಸ್ಥಿತಿಯಲ್ಲಿ ಇದ್ದಾರೆ. ವಿಜಯಪುರ ಜಿಲ್ಲೆ ಬರದ ನಾಡು ಎಂಬ ಹಣೆ ಪಟ್ಟಿ ಕಳಚಿಕೊಳ್ಳಲು ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು. ಚಾಲ್ತಿಯಲ್ಲಿರುವ ಯೋಜನೆಗಳನ್ನು ಬೇಗನೇ ಪೂರ್ಣಗೊಳಿಸಬೇಕು ಎಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.