<p><strong>ಬೆಂಗಳೂರು: </strong>ವೀರಶೈವ– ಲಿಂಗಾಯತ ಒಳಪಂಗಡಗಳಿಗೆ ಮೀಸಲಾತಿ ನೀಡಬೇಕು ಎಂದು ವಿಜಯಪುರ ಜಿಲ್ಲಾ ಮಠಾಧೀಶರ ಒಕ್ಕೂಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.</p>.<p>ಸುಮಾರು 15 ರಿಂದ 20 ಸ್ವಾಮೀಜಿಗಳು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಈ ಸಂಬಂಧ ಮನವಿಯನ್ನು ಅರ್ಪಿಸಿದೆ. ವೀರಶೈವ ಮತ್ತು ಲಿಂಗಾಯತ ಒಳಪಂಗಡಗಳು ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿವೆ ಎಂದು ಹೇಳಿದರು.</p>.<p>ಆಲಮಟ್ಟಿ ಜಲಾಶಯದ ಹಿನ್ನೀರಿನಿಂದಾಗಿ ನಮ್ಮ ಭಾಗದ ರೈತರು ಮನೆ–ಮಠ, ಜಮೀನನ್ನು ಕಳೆದುಕೊಂಡಿದ್ದಾರೆ. ದಯನೀಯ ಸ್ಥಿತಿಯಲ್ಲಿ ಇದ್ದಾರೆ. ವಿಜಯಪುರ ಜಿಲ್ಲೆ ಬರದ ನಾಡು ಎಂಬ ಹಣೆ ಪಟ್ಟಿ ಕಳಚಿಕೊಳ್ಳಲು ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು. ಚಾಲ್ತಿಯಲ್ಲಿರುವ ಯೋಜನೆಗಳನ್ನು ಬೇಗನೇ ಪೂರ್ಣಗೊಳಿಸಬೇಕು ಎಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೀರಶೈವ– ಲಿಂಗಾಯತ ಒಳಪಂಗಡಗಳಿಗೆ ಮೀಸಲಾತಿ ನೀಡಬೇಕು ಎಂದು ವಿಜಯಪುರ ಜಿಲ್ಲಾ ಮಠಾಧೀಶರ ಒಕ್ಕೂಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.</p>.<p>ಸುಮಾರು 15 ರಿಂದ 20 ಸ್ವಾಮೀಜಿಗಳು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಈ ಸಂಬಂಧ ಮನವಿಯನ್ನು ಅರ್ಪಿಸಿದೆ. ವೀರಶೈವ ಮತ್ತು ಲಿಂಗಾಯತ ಒಳಪಂಗಡಗಳು ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿವೆ ಎಂದು ಹೇಳಿದರು.</p>.<p>ಆಲಮಟ್ಟಿ ಜಲಾಶಯದ ಹಿನ್ನೀರಿನಿಂದಾಗಿ ನಮ್ಮ ಭಾಗದ ರೈತರು ಮನೆ–ಮಠ, ಜಮೀನನ್ನು ಕಳೆದುಕೊಂಡಿದ್ದಾರೆ. ದಯನೀಯ ಸ್ಥಿತಿಯಲ್ಲಿ ಇದ್ದಾರೆ. ವಿಜಯಪುರ ಜಿಲ್ಲೆ ಬರದ ನಾಡು ಎಂಬ ಹಣೆ ಪಟ್ಟಿ ಕಳಚಿಕೊಳ್ಳಲು ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು. ಚಾಲ್ತಿಯಲ್ಲಿರುವ ಯೋಜನೆಗಳನ್ನು ಬೇಗನೇ ಪೂರ್ಣಗೊಳಿಸಬೇಕು ಎಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>